ಚಾಮರಾಜನಗರ

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸವಾರ ಮೃತಪಟ್ಟಿರುವ ಘಟನೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಿ ವ್ಯಾಪ್ತಿಯಲ್ಲಿ ಜರುಗಿದೆ.

ತಮಿಳುನಾಡಿನ ಮೇಟ್ಟೂರು ತಾಲೂಕಿನ ತೂಕನಪಟ್ಟಿ ಗ್ರಾಮದ ರಾಹುಲ್ (23) ಸ್ಥಳದಲ್ಲಿಯೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ.

ಘಟನೆಯ ವಿವರ
ತಮಿಳುನಾಡಿನ ಮೇಟ್ಟೂರು ತಾಲೂಕಿನ ತೂಕನ ಪಟ್ಟಿ ಗ್ರಾಮದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದು ದರ್ಶನ ಮಾಡಿ ವಾಪಸ್ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ತಮಿಳುನಾಡಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಸರಕು ಸಾಗಣೆ ಮಾಡುತ್ತಿದ್ದ ಟೆಂಪೋ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಚಲಾಯಿಸುತ್ತಿದ್ದ ರಾಹುಲ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹಿಂಬದಿಯಲ್ಲಿ ಕುಳಿತಿದ್ದ ಸ್ನೇಹಿತ ತೊಟ್ಟಿಲ್ ಪಟ್ಟಿ ಗ್ರಾಮದ ಗಗನ್ (17)ತೀವ್ರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ಗಾಯಗೊಂಡಿದ್ದ ಸವಾರರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ತಡವಾಗಿ ಬಂದಿದೆ. ಇದಲ್ಲದೆ ಮಲೆ ಮಹದೇಶ್ವರ ಬೆಟ್ಟದಲ್ಲಿ ವೈದ್ಯಾಧಿಕಾರಿಗಳು ಇಲ್ಲದೆ ಇರುವುದರಿಂದ ಗಾಯಗೊಂಡಿದ್ದ ಸವಾರರನ್ನು ತಮಿಳುನಾಡಿಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ವ್ಯವಸ್ಥೆ ಮಾಡಿಕೊಡುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ. ಆದರೆ ನಮಗೆ ತಮಿಳುನಾಡಿಗೆ ಹೋಗಲು ಯಾವುದೇ ಅನುಮತಿ ಇಲ್ಲ ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಗೆ ಬಿಟ್ಟುಕೊಡುವುದಾಗಿ ತಿಳಿಸಿದ್ದಾರೆ. ಇದರಿಂದ ದಿಕ್ಕು ತೋಚದೆ ಸ್ಥಳೀಯರು ಖಾಸಗಿ ಆಂಬುಲೆನ್ಸ್ ಮೂಲಕ ಮೇಟ್ಟೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಅಪಘಾತ ತಿಳಿಯುತ್ತಿದ್ದಂತೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

3 mins ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

35 mins ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

44 mins ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

46 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

51 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

1 hour ago