ಹನೂರು: ಕಾವೇರಿ ಹಾಗೂ ಕಪಿಲಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಸಿಗರ ಹಿತದೃಷ್ಟಿಯಿಂದ ಹೊಗೇನಕಲ್ ಜಲಪಾತ ವ್ಯಾಪ್ತಿಯಲ್ಲಿ ದೋಣಿ ವಿಹಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕಪಿಲಾ ಹಾಗೂ ಕಾವೇರಿ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೊಗೇನಕಲ್ ಪಾಲ್ಸ್ ಮೈದುಂಬಿಕೊಂಡು ಎಲ್ಲರ ಕಣ್ಮನ ಸೆಳೆಯುತ್ತಿದೆ. ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿರುವುದನ್ನು ಅರಿತ ಅರಣ್ಯ ಇಲಾಖೆ ಹೊಗೇನಕಲ್ ಪಾಲ್ಸ್ನಲ್ಲಿ ತೆಪ್ಪಗಳನ್ನು ಇಳಿಸದಂತೆ ಖಡಕ್ ಸೂಚನೆ ನೀಡಿದೆ.
ಹೊಗೇನಕಲ್ನಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಪ್ರವಾಸಿಗರು ನೀರಿಗಿಳಿಯುವುದು ಸರ್ವೇ ಸಾಮಾನ್ಯ. ಈ ಹಿಂದೆ ತಮಿಳುನಾಡಿನ ಕುಟುಂಬವೊಂದು ಪಾಲ್ಸ್ಗೆ ಇಳಿದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.
ಈ ಘಟನೆಗಳು ಮರುಕಳಿಸಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ದೋಣಿ ವಿಹಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಮಳೆ ಕಡಿಮೆಯಾಗಿ ನೀರಿನ ಹರಿವು ಕಡಿಮೆಯಾಗುವವರೆಗೂ ದೋಣಿ ವಿಹಾರ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಈ ಸೂಚನೆಯ ಪರಿಣಾಮ ಹೊಗೇನಕಲ್ ಪಾಲ್ಸ್ಗೆ ತೆರಳುವ ಪ್ರವಾಸಿಗರಿಗೆ ಕೊಂಚ ಬೇಸರವಾಗಿದೆ ಎನ್ನಲಾಗಿದೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…