ಹನೂರು: ಕಾವೇರಿ ಹಾಗೂ ಕಪಿಲಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಸಿಗರ ಹಿತದೃಷ್ಟಿಯಿಂದ ಹೊಗೇನಕಲ್ ಜಲಪಾತ ವ್ಯಾಪ್ತಿಯಲ್ಲಿ ದೋಣಿ ವಿಹಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕಪಿಲಾ ಹಾಗೂ ಕಾವೇರಿ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೊಗೇನಕಲ್ ಪಾಲ್ಸ್ ಮೈದುಂಬಿಕೊಂಡು ಎಲ್ಲರ ಕಣ್ಮನ ಸೆಳೆಯುತ್ತಿದೆ. ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿರುವುದನ್ನು ಅರಿತ ಅರಣ್ಯ ಇಲಾಖೆ ಹೊಗೇನಕಲ್ ಪಾಲ್ಸ್ನಲ್ಲಿ ತೆಪ್ಪಗಳನ್ನು ಇಳಿಸದಂತೆ ಖಡಕ್ ಸೂಚನೆ ನೀಡಿದೆ.
ಹೊಗೇನಕಲ್ನಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಪ್ರವಾಸಿಗರು ನೀರಿಗಿಳಿಯುವುದು ಸರ್ವೇ ಸಾಮಾನ್ಯ. ಈ ಹಿಂದೆ ತಮಿಳುನಾಡಿನ ಕುಟುಂಬವೊಂದು ಪಾಲ್ಸ್ಗೆ ಇಳಿದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.
ಈ ಘಟನೆಗಳು ಮರುಕಳಿಸಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ದೋಣಿ ವಿಹಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಮಳೆ ಕಡಿಮೆಯಾಗಿ ನೀರಿನ ಹರಿವು ಕಡಿಮೆಯಾಗುವವರೆಗೂ ದೋಣಿ ವಿಹಾರ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಈ ಸೂಚನೆಯ ಪರಿಣಾಮ ಹೊಗೇನಕಲ್ ಪಾಲ್ಸ್ಗೆ ತೆರಳುವ ಪ್ರವಾಸಿಗರಿಗೆ ಕೊಂಚ ಬೇಸರವಾಗಿದೆ ಎನ್ನಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…