ಹನೂರು: ಕಾವೇರಿ ಹಾಗೂ ಕಪಿಲಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಸಿಗರ ಹಿತದೃಷ್ಟಿಯಿಂದ ಹೊಗೇನಕಲ್ ಜಲಪಾತ ವ್ಯಾಪ್ತಿಯಲ್ಲಿ ದೋಣಿ ವಿಹಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕಪಿಲಾ ಹಾಗೂ ಕಾವೇರಿ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೊಗೇನಕಲ್ ಪಾಲ್ಸ್ ಮೈದುಂಬಿಕೊಂಡು ಎಲ್ಲರ ಕಣ್ಮನ ಸೆಳೆಯುತ್ತಿದೆ. ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿರುವುದನ್ನು ಅರಿತ ಅರಣ್ಯ ಇಲಾಖೆ ಹೊಗೇನಕಲ್ ಪಾಲ್ಸ್ನಲ್ಲಿ ತೆಪ್ಪಗಳನ್ನು ಇಳಿಸದಂತೆ ಖಡಕ್ ಸೂಚನೆ ನೀಡಿದೆ.
ಹೊಗೇನಕಲ್ನಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಪ್ರವಾಸಿಗರು ನೀರಿಗಿಳಿಯುವುದು ಸರ್ವೇ ಸಾಮಾನ್ಯ. ಈ ಹಿಂದೆ ತಮಿಳುನಾಡಿನ ಕುಟುಂಬವೊಂದು ಪಾಲ್ಸ್ಗೆ ಇಳಿದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.
ಈ ಘಟನೆಗಳು ಮರುಕಳಿಸಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ದೋಣಿ ವಿಹಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಮಳೆ ಕಡಿಮೆಯಾಗಿ ನೀರಿನ ಹರಿವು ಕಡಿಮೆಯಾಗುವವರೆಗೂ ದೋಣಿ ವಿಹಾರ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಈ ಸೂಚನೆಯ ಪರಿಣಾಮ ಹೊಗೇನಕಲ್ ಪಾಲ್ಸ್ಗೆ ತೆರಳುವ ಪ್ರವಾಸಿಗರಿಗೆ ಕೊಂಚ ಬೇಸರವಾಗಿದೆ ಎನ್ನಲಾಗಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…