ಚಾಮರಾಜನಗರ

ಚಾಮರಾಜನಗರ ಜಿಲ್ಲೆಯನ್ನು ಮಾದರಿ ಜಿಲ್ಲೆ ಮಾಡುವುದೇ ಗುರಿ : ಸೋಮಣ್ಣ

ಚಾಮರಾಜನಗರ : ನಾನು ಯಾವ ಕ್ಷೇತ್ರದಿಂದಲೂ ಟಿಕೆಟ್ ಕೇಳಿಲ್ಲ. ವರಿಷ್ಠರು ಈ ಬಗ್ಗೆ‌ ನಿರ್ಧಾರ ಕೈಗೊಳ್ಳುತ್ತಾರೆ. ಆದರೆ ಒಂದಂತು ಸತ್ಯ. ಸೋಮಣ್ಣ ಅಭಿವೃದ್ಧಿ ಪರ. ಸೋಮಣ್ಣ ಇದ್ದರೆ ಅಭಿವೃದ್ಧಿಯಾಗುತ್ತದೆ’ ಎಂದು ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಮಂಗಳವಾರ ಹೇಳಿದರು.

ಚುನಾವಣೆಯಲ್ಲಿ ಎಲ್ಲಿಂದ ಸ್ಪರ್ಧಿಸುತ್ತೀರಿ, ಚಾಮರಾಜನಗರ ಟಿಕೆಟ್ ಖಚಿತವಾಯಿತೇ’ ಎಂದು ಮಾಧ್ಯಮಗಳ ಪ್ರಶ್ನೆಗೆ ಅದನ್ನು ಪಕ್ಷದ ನಾಯಕರು ತೀರ್ಮಾನ ಮಾಡುತ್ತಾರೆ. 224 ಕ್ಷೇತ್ರಗಳಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸುವೆ. ಇದೇ ಕ್ಷೇತ್ರ ಬೇಕು ಎಂದು ಕೇಳಿಲ್ಲ. ಸ್ವಲ್ಪ ಕಾಯಿರಿ‌. ಇನ್ನು ಎರಡು ಗಂಟೆಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಆಗ ಗೊತ್ತಾಗುತ್ತದೆ ಎಂದು ಹೇಳಿದರು.

ಮಾದರಿ ಜಿಲ್ಲೆಯೇ ಗುರಿ: ಬಿಜೆಪಿ ರೈತ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಸೋಮಣ್ಣ, ಚಾಮರಾಜನಗರ ಅಭಿವೃದ್ಧಿಯಲ್ಲಿ ಹಿಂದುಳಿದಿರಬಹುದು. ಆದರೆ ಸ್ವಾಭಿಮಾನ, ಸಂಸ್ಕಾರದಲ್ಲಿ ಹಿಂದೆ ಬಿದ್ದಿಲ್ಲ. ಮಹದೇಶ್ವರ ಸ್ವಾಮಿ ಆಶೀರ್ವಾದ ಪಡೆದುಕೊಂಡು ಈ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುವುದೇ ನನ್ನ ಗುರಿ ಎಂದರು.

ಖಚಿತವಾಯಿತೇ ಟಿಕೆಟ್?: ಸಚಿವ ಸೋಮಣ್ಣ ದಿಢೀರ್ ಆಗಿ ಮಂಗಳವಾರ ಚಾಮರಾಜನಗರಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದ್ದು, ಚಾಮರಾಜನಗರ ಕ್ಷೇತ್ರದಿಂದ ಅವರಿಗೆ ಟಿಕೆಟ್ ಖಚಿತವಾಗಿದೆ ಎಂಬ ಚರ್ಚೆ ನಡೆಯುತ್ತಿದೆ. ರೈತ ಸಮಾವೇಶದಲ್ಲಿ ಸೋಮಣ್ಣ ಭಾಗಿಯಾಗುವುದು ನಿಗದಿಯಾಗಿರಲಿಲ್ಲ. ಸೋಮವಾರ ಮಧ್ಯಾಹ್ನ ಅವರ ಪ್ರವಾಸ ವೇಳಾಪಟ್ಟಿ ಬರುತ್ತಿದ್ದಂತೆಯೇ ಬಿರುಸಿನ ಚರ್ಚೆ ಆರಂಭವಾಗಿದೆ.’ವರಿಷ್ಠರು ಚಾಮರಾಜನಗರದ ಟಿಕೆಟ್ ಖಚಿತ ಪಡಿಸಿದ ನಂತರ ಸೋಮಣ್ಣ ಜಿಲ್ಲೆಗೆ ಬಂದಿದ್ದಾರೆ’ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ.ಸೋಮಣ್ಣ ಅವರು ಮಹದೇಶ್ವರ‌ ಬೆಟ್ಟಕ್ಕೂ ಭೇಟಿ‌ ನೀಡಿ ಪೂಜೆ ಸಲ್ಲಿಸಲಿರುವುದು ವದಂತಿಗೆ ಇನ್ನಷ್ಟು ಪುಷ್ಟಿ‌ ನೀಡಿದೆ

lokesh

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

12 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

12 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

12 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

12 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

12 hours ago