ಚಾಮರಾಜನಗರ

ಕಾರು ಪಲ್ಟಿ; ಇಬ್ಬರಿಗೆ ಗಾಯ

ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.

ಬೆಂಗಳೂರು ಮೂಲದ ಹರೀಶ್(೨೮ ), ಅಭಿನಯ(೨೪) ಅಪಘಾತದಲ್ಲಿ ಗಾಯಗೊಂಡವರು.

ಬೆಂಗಳೂರಿನಿಂದ ನಾಲ್ವರು ಕಾರಿನಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಪಟ್ಟಣದ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ಹಳ್ಳವೊಂದಕ್ಕೆ ಕಾರು ಪಲ್ಟಿಯಾಗಿ ಜಖಂಗೊಂಡಿದೆ. ಅಲ್ಲದೆ ಈ ಅವಘಡದಲ್ಲಿ ಇಬ್ಬರಿಗೆ ಪೆಟ್ಟಾಗಿದ್ದು, ಅವರನ್ನು ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅದ್ಧೂರಿಯಾಗಿ ನೆರವೇರಿದ ನಂಜನಗೂಡಿನ ಗೌತಮ ಪಂಚಮಹಾರಥೋತ್ಸವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಹಸ್ರಾರು ಮಂದಿ ಭಕ್ತರ ಸಮ್ಮುಖದಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಇಂದು…

11 mins ago

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

3 hours ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

3 hours ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

3 hours ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

3 hours ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

3 hours ago