n mahesh former minister
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತ ಮುಖ್ಯಮಂತ್ರಿ ಎಂಬುದು ಕನಸಾಗಿದೆ. ದಲಿತರು ಎಲ್ಲಿಯವರೆಗೆ ಒಂದು ಪಕ್ಷದ ವೋಟ್ ಬ್ಯಾಂಕ್ ಆಗಿರ್ತಾರೋ ಅಲ್ಲಿಯವರೆಗೂ ಸ್ಥಾನಮಾನ ಸಿಗಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ದಲಿತರು ಸಿಎಂ ಆಗ್ತಾರೆ ಅಂತ ದಲಿತರ ನಿರೀಕ್ಷೆ ಆಗಿತ್ತು. ಆದರೆ ಅದು ಸುಳ್ಳಾಗಿದೆ. ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗ್ತಾರೆ ಅಂತ ದಲಿತರು ಕಾಂಗ್ರೆಸ್ ಬೆಂಬಲಿಸಿದರು ಎಂದು ತಿಳಿಸಿದರು.
ಪರಮೇಶ್ವರ್ ಸಿಎಂ ಆಗಿ ಬಿಡ್ತಾರೆ ಅಂತ ಅವರನ್ನು ಸೋಲಿಸಲಾಯ್ತು. ಸಿಎಂ ಮಾಡ್ಲಿ ಬಿಡ್ಲಿ ದಲಿತರು ತಮ್ಮ ವೋಟ್ಬ್ಯಾಂಕ್ ಅಂತ ಕಾಂಗ್ರೆಸ್ ಅಂದುಕೊಂಡಿದೆ. ಈ ಸೂಕ್ಷ್ಮ ಅರ್ಥ ಆಗುವವರೆಗೂ ದಲಿತರಿಗೆ ಸ್ಥಾನಮಾನ ಸಿಗುತ್ತೆ ಎಂಬುದು ಕೇವಲ ಭ್ರಮೆ. ದಲಿತರು ಆತ್ಮಾವಲೋಕನ ಮಾಡಿಕೊಳ್ಳಲು ಇದು ಸಕಾಲ ಎಂದು ಸಲಹೆ ನೀಡಿದರು.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…