ಚಾಮರಾಜನಗರ

ಮೀಸಲಾತಿ ಕಲ್ಪಿಸಿದ ಕೀರ್ತಿ ಮೈಸೂರು ರಾಜರದು : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಗುಂಡ್ಲುಪೇಟೆ : ಶೋಷಿತರು ಹಾಗೂ ಹಿಂದುಳಿದವರ ಅಭಿವೃದ್ಧಿಗಾಗಿ ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿ ಕಲ್ಪಿಸಿದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಬಹು ದೊಡ್ಡದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು.

ತಾಲ್ಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಡಾ.ಜಿ.ಪರಮೇಶ್ವರ ಅಭಿಮಾನಿಗಳ ಬಳಗ ಹಾಗೂ ಬಾಳೆ ಎಲೆ ಮಾದಯ್ಯ ಸೇವಾ ಟ್ರಸ್ಟ್ ಸಹಯೋಗದಲ್ಲಿ ಏರ್ಪಡಿಸಿದ್ದ ಡಾ.ಜಿ.ಪರಮೇಶ್ವರ್ ೭೫ನೇ ನೆನಪಿನ ಭವನ ಅಮೃತ ಮಹೋತ್ಸವ ಉದ್ಘಾಟನೆ, ಎಚ್.ಎಂ.ಗಂಗಾಧರಯ್ಯ ಪ್ರತಿಮೆ ಅನಾವರಣ, ಪರಮೇಶ್ವರ ಸಾಂಸ್ಕೃತಿಕ ಪ್ರಶಸ್ತಿ ಪ್ರದಾನ, ಮಹಿಳಾ ಗೃಹ ಕೈಗಾರಿಕೆ ಘಟಕದ ನೂತನ ಕಟ್ಟಡ, ಬಾಳೆ ಎಲೆ ಸಹಕಾರ ಸಂಘ ಉದ್ಘಾಟನೆ, ಡಾ.ಜಿ.ಪರಮೇಶ್ವರ ಸಾಲು ಮರದ ರಸ್ತೆ ನಾಮಕರಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೈಸೂರಿನ ಮಹಾರಾಜರುಗಳ ನಿಲುವು ಯಾವಾಗಲೂ ಸಾಮಾಜಿಕ ನ್ಯಾಯದ ಪರವಾಗಿತ್ತು. ೧೯೨೭ರಲ್ಲಿ ಮಿಲ್ಲರ್ ಆಯೋಗದ ಶಿಫಾರಸಿನಂತೆ, ಬ್ರಾಹ್ಮಣೇತರರಿಗೆ ಶೇ.೭೫ ರಷ್ಟು ಮೀಸಲಾತಿ ನೀಡಿ ಹೊಸ ಶಕೆಗೆ ಮುನ್ನುಡಿಯನ್ನಿಟ್ಟರು. ಆದ್ದರಿಂದ ನಾವು ಯದುವಂಶಸ್ಥ ರಾಜರ ಕುಟುಂಬವನ್ನು ಗೌರವಿಸುತ್ತೇವೆ ಎಂದರು.

ನಮ್ಮ ಸಿದ್ದಾರ್ಥ ಶಿಕ್ಷಣ ಸಂಸ್ಥೆಯಲ್ಲಿ ನಮ್ಮ ತಂದೆಗೆ ಪ್ರೀತಿ ಪಾತ್ರರಾಗಿ, ನಮ್ಮ ಕುಟುಂಬಕ್ಕೆ ಮೂರನೇ ಮಗನಾಗಿ ಒಳ್ಳೆಯ ಕೆಲಸಗಳನ್ನು ಪ್ರೊ.ಮಹದೇವ ಭರಣಿ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಪರಮೇಶ್ವರ್ ಟ್ರಸ್ಟ್‌ಗೆ ಹತ್ತು ಲಕ್ಷ ಸಹಾಯಧನ ನೀಡುವುದಾಗಿ ಘೋಷಿಸಿದರು.

ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಸರಳ ಸಜ್ಜನಿಕೆಯ ರಾಜಕಾರಣಿ ಡಾ.ಜಿ.ಪರಮೇಶ್ವರ್ ಸಾಧನೆ ಬಹಳ ದೊಡ್ಡದು. ಬಂಡಿಪುರ ಅರಣ್ಯದೊಳಗಿನ ಹೆದ್ದಾರಿಗಳಲ್ಲಿ ವಾಹನಗಳ ರಾತ್ರಿ ಸಂಚಾರಕ್ಕೆ ಯಾವಾಗಲೂ ನಮ್ಮ ವಿರೋಧವಿದೆ. ಪ್ರಾಣಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದರು.

ಸಮಾರಂಭದಲ್ಲಿ ಮನೋರಖ್ಖಿತ ಬಂತೇಜಿ, ನಿವೃತ್ತ ಐಎಫ್‌ಎಸ್ ಅಧಿಕಾರಿ ಡಾ.ಆರ್.ರಾಜು, ಪ್ರೊ.ಮಹದೇವಭರಣಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಅಧಿಕ್ಷಕರಾದ ಆನಂದಕುಮಾರ್, ಎಸ್‌ಪಿ ಡಾ.ಬಿ.ಟಿ.ಕವಿತಾ, ಕಲಬುರಗಿ ವಿವಿಯ ಪ್ರಾಧ್ಯಾಪಕ ಡಾ.ಎಚ್.ಸಿ.ಪೋತೆ, ಸಿದ್ದಾರ್ಥ ವಿ.ವಿಯ ಕುಲ ಸಚಿವ ಗುರುಶಂಕರ್, ಕೀಲುಮೋಳೆ ತಜ್ಞ ವೈದ್ಯ ಡಾ.ಕಿರಣ್ ಕಾಳಯ್ಯ, ಡಾ.ಗುರುಲಿಂಗಯ್ಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಂಟಿ ನಿರ್ದೇಶಕರಾದ ಲಕ್ಷಮ್ಮ, ಉದ್ಯಮಿ ಚಿದಾನಂದ, ಸಾಹಿತಿ ಕಾಳಿಂಗಸ್ವಾಮಿ ಸಿದ್ದಾರ್ಥ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

1 hour ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

1 hour ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

1 hour ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

2 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

2 hours ago