ಚಾಮರಾಜನಗರ

ಮೀಸಲಾತಿ ಕಲ್ಪಿಸಿದ ಕೀರ್ತಿ ಮೈಸೂರು ರಾಜರದು : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಗುಂಡ್ಲುಪೇಟೆ : ಶೋಷಿತರು ಹಾಗೂ ಹಿಂದುಳಿದವರ ಅಭಿವೃದ್ಧಿಗಾಗಿ ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿ ಕಲ್ಪಿಸಿದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಬಹು ದೊಡ್ಡದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು.

ತಾಲ್ಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಡಾ.ಜಿ.ಪರಮೇಶ್ವರ ಅಭಿಮಾನಿಗಳ ಬಳಗ ಹಾಗೂ ಬಾಳೆ ಎಲೆ ಮಾದಯ್ಯ ಸೇವಾ ಟ್ರಸ್ಟ್ ಸಹಯೋಗದಲ್ಲಿ ಏರ್ಪಡಿಸಿದ್ದ ಡಾ.ಜಿ.ಪರಮೇಶ್ವರ್ ೭೫ನೇ ನೆನಪಿನ ಭವನ ಅಮೃತ ಮಹೋತ್ಸವ ಉದ್ಘಾಟನೆ, ಎಚ್.ಎಂ.ಗಂಗಾಧರಯ್ಯ ಪ್ರತಿಮೆ ಅನಾವರಣ, ಪರಮೇಶ್ವರ ಸಾಂಸ್ಕೃತಿಕ ಪ್ರಶಸ್ತಿ ಪ್ರದಾನ, ಮಹಿಳಾ ಗೃಹ ಕೈಗಾರಿಕೆ ಘಟಕದ ನೂತನ ಕಟ್ಟಡ, ಬಾಳೆ ಎಲೆ ಸಹಕಾರ ಸಂಘ ಉದ್ಘಾಟನೆ, ಡಾ.ಜಿ.ಪರಮೇಶ್ವರ ಸಾಲು ಮರದ ರಸ್ತೆ ನಾಮಕರಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೈಸೂರಿನ ಮಹಾರಾಜರುಗಳ ನಿಲುವು ಯಾವಾಗಲೂ ಸಾಮಾಜಿಕ ನ್ಯಾಯದ ಪರವಾಗಿತ್ತು. ೧೯೨೭ರಲ್ಲಿ ಮಿಲ್ಲರ್ ಆಯೋಗದ ಶಿಫಾರಸಿನಂತೆ, ಬ್ರಾಹ್ಮಣೇತರರಿಗೆ ಶೇ.೭೫ ರಷ್ಟು ಮೀಸಲಾತಿ ನೀಡಿ ಹೊಸ ಶಕೆಗೆ ಮುನ್ನುಡಿಯನ್ನಿಟ್ಟರು. ಆದ್ದರಿಂದ ನಾವು ಯದುವಂಶಸ್ಥ ರಾಜರ ಕುಟುಂಬವನ್ನು ಗೌರವಿಸುತ್ತೇವೆ ಎಂದರು.

ನಮ್ಮ ಸಿದ್ದಾರ್ಥ ಶಿಕ್ಷಣ ಸಂಸ್ಥೆಯಲ್ಲಿ ನಮ್ಮ ತಂದೆಗೆ ಪ್ರೀತಿ ಪಾತ್ರರಾಗಿ, ನಮ್ಮ ಕುಟುಂಬಕ್ಕೆ ಮೂರನೇ ಮಗನಾಗಿ ಒಳ್ಳೆಯ ಕೆಲಸಗಳನ್ನು ಪ್ರೊ.ಮಹದೇವ ಭರಣಿ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಪರಮೇಶ್ವರ್ ಟ್ರಸ್ಟ್‌ಗೆ ಹತ್ತು ಲಕ್ಷ ಸಹಾಯಧನ ನೀಡುವುದಾಗಿ ಘೋಷಿಸಿದರು.

ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಸರಳ ಸಜ್ಜನಿಕೆಯ ರಾಜಕಾರಣಿ ಡಾ.ಜಿ.ಪರಮೇಶ್ವರ್ ಸಾಧನೆ ಬಹಳ ದೊಡ್ಡದು. ಬಂಡಿಪುರ ಅರಣ್ಯದೊಳಗಿನ ಹೆದ್ದಾರಿಗಳಲ್ಲಿ ವಾಹನಗಳ ರಾತ್ರಿ ಸಂಚಾರಕ್ಕೆ ಯಾವಾಗಲೂ ನಮ್ಮ ವಿರೋಧವಿದೆ. ಪ್ರಾಣಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದರು.

ಸಮಾರಂಭದಲ್ಲಿ ಮನೋರಖ್ಖಿತ ಬಂತೇಜಿ, ನಿವೃತ್ತ ಐಎಫ್‌ಎಸ್ ಅಧಿಕಾರಿ ಡಾ.ಆರ್.ರಾಜು, ಪ್ರೊ.ಮಹದೇವಭರಣಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಅಧಿಕ್ಷಕರಾದ ಆನಂದಕುಮಾರ್, ಎಸ್‌ಪಿ ಡಾ.ಬಿ.ಟಿ.ಕವಿತಾ, ಕಲಬುರಗಿ ವಿವಿಯ ಪ್ರಾಧ್ಯಾಪಕ ಡಾ.ಎಚ್.ಸಿ.ಪೋತೆ, ಸಿದ್ದಾರ್ಥ ವಿ.ವಿಯ ಕುಲ ಸಚಿವ ಗುರುಶಂಕರ್, ಕೀಲುಮೋಳೆ ತಜ್ಞ ವೈದ್ಯ ಡಾ.ಕಿರಣ್ ಕಾಳಯ್ಯ, ಡಾ.ಗುರುಲಿಂಗಯ್ಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಂಟಿ ನಿರ್ದೇಶಕರಾದ ಲಕ್ಷಮ್ಮ, ಉದ್ಯಮಿ ಚಿದಾನಂದ, ಸಾಹಿತಿ ಕಾಳಿಂಗಸ್ವಾಮಿ ಸಿದ್ದಾರ್ಥ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

5 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

5 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

6 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

6 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

6 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

7 hours ago