ಚಾಮರಾಜನಗರ

ಮೀಸಲಾತಿ ಕಲ್ಪಿಸಿದ ಕೀರ್ತಿ ಮೈಸೂರು ರಾಜರದು : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಗುಂಡ್ಲುಪೇಟೆ : ಶೋಷಿತರು ಹಾಗೂ ಹಿಂದುಳಿದವರ ಅಭಿವೃದ್ಧಿಗಾಗಿ ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿ ಕಲ್ಪಿಸಿದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಬಹು ದೊಡ್ಡದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು.

ತಾಲ್ಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಡಾ.ಜಿ.ಪರಮೇಶ್ವರ ಅಭಿಮಾನಿಗಳ ಬಳಗ ಹಾಗೂ ಬಾಳೆ ಎಲೆ ಮಾದಯ್ಯ ಸೇವಾ ಟ್ರಸ್ಟ್ ಸಹಯೋಗದಲ್ಲಿ ಏರ್ಪಡಿಸಿದ್ದ ಡಾ.ಜಿ.ಪರಮೇಶ್ವರ್ ೭೫ನೇ ನೆನಪಿನ ಭವನ ಅಮೃತ ಮಹೋತ್ಸವ ಉದ್ಘಾಟನೆ, ಎಚ್.ಎಂ.ಗಂಗಾಧರಯ್ಯ ಪ್ರತಿಮೆ ಅನಾವರಣ, ಪರಮೇಶ್ವರ ಸಾಂಸ್ಕೃತಿಕ ಪ್ರಶಸ್ತಿ ಪ್ರದಾನ, ಮಹಿಳಾ ಗೃಹ ಕೈಗಾರಿಕೆ ಘಟಕದ ನೂತನ ಕಟ್ಟಡ, ಬಾಳೆ ಎಲೆ ಸಹಕಾರ ಸಂಘ ಉದ್ಘಾಟನೆ, ಡಾ.ಜಿ.ಪರಮೇಶ್ವರ ಸಾಲು ಮರದ ರಸ್ತೆ ನಾಮಕರಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೈಸೂರಿನ ಮಹಾರಾಜರುಗಳ ನಿಲುವು ಯಾವಾಗಲೂ ಸಾಮಾಜಿಕ ನ್ಯಾಯದ ಪರವಾಗಿತ್ತು. ೧೯೨೭ರಲ್ಲಿ ಮಿಲ್ಲರ್ ಆಯೋಗದ ಶಿಫಾರಸಿನಂತೆ, ಬ್ರಾಹ್ಮಣೇತರರಿಗೆ ಶೇ.೭೫ ರಷ್ಟು ಮೀಸಲಾತಿ ನೀಡಿ ಹೊಸ ಶಕೆಗೆ ಮುನ್ನುಡಿಯನ್ನಿಟ್ಟರು. ಆದ್ದರಿಂದ ನಾವು ಯದುವಂಶಸ್ಥ ರಾಜರ ಕುಟುಂಬವನ್ನು ಗೌರವಿಸುತ್ತೇವೆ ಎಂದರು.

ನಮ್ಮ ಸಿದ್ದಾರ್ಥ ಶಿಕ್ಷಣ ಸಂಸ್ಥೆಯಲ್ಲಿ ನಮ್ಮ ತಂದೆಗೆ ಪ್ರೀತಿ ಪಾತ್ರರಾಗಿ, ನಮ್ಮ ಕುಟುಂಬಕ್ಕೆ ಮೂರನೇ ಮಗನಾಗಿ ಒಳ್ಳೆಯ ಕೆಲಸಗಳನ್ನು ಪ್ರೊ.ಮಹದೇವ ಭರಣಿ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಪರಮೇಶ್ವರ್ ಟ್ರಸ್ಟ್‌ಗೆ ಹತ್ತು ಲಕ್ಷ ಸಹಾಯಧನ ನೀಡುವುದಾಗಿ ಘೋಷಿಸಿದರು.

ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಸರಳ ಸಜ್ಜನಿಕೆಯ ರಾಜಕಾರಣಿ ಡಾ.ಜಿ.ಪರಮೇಶ್ವರ್ ಸಾಧನೆ ಬಹಳ ದೊಡ್ಡದು. ಬಂಡಿಪುರ ಅರಣ್ಯದೊಳಗಿನ ಹೆದ್ದಾರಿಗಳಲ್ಲಿ ವಾಹನಗಳ ರಾತ್ರಿ ಸಂಚಾರಕ್ಕೆ ಯಾವಾಗಲೂ ನಮ್ಮ ವಿರೋಧವಿದೆ. ಪ್ರಾಣಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದರು.

ಸಮಾರಂಭದಲ್ಲಿ ಮನೋರಖ್ಖಿತ ಬಂತೇಜಿ, ನಿವೃತ್ತ ಐಎಫ್‌ಎಸ್ ಅಧಿಕಾರಿ ಡಾ.ಆರ್.ರಾಜು, ಪ್ರೊ.ಮಹದೇವಭರಣಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಅಧಿಕ್ಷಕರಾದ ಆನಂದಕುಮಾರ್, ಎಸ್‌ಪಿ ಡಾ.ಬಿ.ಟಿ.ಕವಿತಾ, ಕಲಬುರಗಿ ವಿವಿಯ ಪ್ರಾಧ್ಯಾಪಕ ಡಾ.ಎಚ್.ಸಿ.ಪೋತೆ, ಸಿದ್ದಾರ್ಥ ವಿ.ವಿಯ ಕುಲ ಸಚಿವ ಗುರುಶಂಕರ್, ಕೀಲುಮೋಳೆ ತಜ್ಞ ವೈದ್ಯ ಡಾ.ಕಿರಣ್ ಕಾಳಯ್ಯ, ಡಾ.ಗುರುಲಿಂಗಯ್ಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಂಟಿ ನಿರ್ದೇಶಕರಾದ ಲಕ್ಷಮ್ಮ, ಉದ್ಯಮಿ ಚಿದಾನಂದ, ಸಾಹಿತಿ ಕಾಳಿಂಗಸ್ವಾಮಿ ಸಿದ್ದಾರ್ಥ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಜಾರ್ಖಂಡ್‌ನಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್:‌ 10 ಮಂದಿ ನಕ್ಸಲರ ಹತ್ಯೆ

ಜಾರ್ಖಂಡ್:‌ ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…

7 mins ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ವಿರೋಧಿಸಿ ಮುಂದುವರಿದ ಪ್ರತಿಭಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…

36 mins ago

ಸದನದಲ್ಲಿ ಅಗೌರವ ತೋರಿದ ಶಾಸಕರ ವಿರುದ್ಧ ಕ್ರಮ ಆಗಲಿ: ಆರ್.‌ಅಶೋಕ್‌

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.…

43 mins ago

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

1 hour ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

2 hours ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

2 hours ago