ಚಾಮರಾಜನಗರ

ಮೀಸಲಾತಿ ಕಲ್ಪಿಸಿದ ಕೀರ್ತಿ ಮೈಸೂರು ರಾಜರದು : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಗುಂಡ್ಲುಪೇಟೆ : ಶೋಷಿತರು ಹಾಗೂ ಹಿಂದುಳಿದವರ ಅಭಿವೃದ್ಧಿಗಾಗಿ ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿ ಕಲ್ಪಿಸಿದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಬಹು ದೊಡ್ಡದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು.

ತಾಲ್ಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಡಾ.ಜಿ.ಪರಮೇಶ್ವರ ಅಭಿಮಾನಿಗಳ ಬಳಗ ಹಾಗೂ ಬಾಳೆ ಎಲೆ ಮಾದಯ್ಯ ಸೇವಾ ಟ್ರಸ್ಟ್ ಸಹಯೋಗದಲ್ಲಿ ಏರ್ಪಡಿಸಿದ್ದ ಡಾ.ಜಿ.ಪರಮೇಶ್ವರ್ ೭೫ನೇ ನೆನಪಿನ ಭವನ ಅಮೃತ ಮಹೋತ್ಸವ ಉದ್ಘಾಟನೆ, ಎಚ್.ಎಂ.ಗಂಗಾಧರಯ್ಯ ಪ್ರತಿಮೆ ಅನಾವರಣ, ಪರಮೇಶ್ವರ ಸಾಂಸ್ಕೃತಿಕ ಪ್ರಶಸ್ತಿ ಪ್ರದಾನ, ಮಹಿಳಾ ಗೃಹ ಕೈಗಾರಿಕೆ ಘಟಕದ ನೂತನ ಕಟ್ಟಡ, ಬಾಳೆ ಎಲೆ ಸಹಕಾರ ಸಂಘ ಉದ್ಘಾಟನೆ, ಡಾ.ಜಿ.ಪರಮೇಶ್ವರ ಸಾಲು ಮರದ ರಸ್ತೆ ನಾಮಕರಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೈಸೂರಿನ ಮಹಾರಾಜರುಗಳ ನಿಲುವು ಯಾವಾಗಲೂ ಸಾಮಾಜಿಕ ನ್ಯಾಯದ ಪರವಾಗಿತ್ತು. ೧೯೨೭ರಲ್ಲಿ ಮಿಲ್ಲರ್ ಆಯೋಗದ ಶಿಫಾರಸಿನಂತೆ, ಬ್ರಾಹ್ಮಣೇತರರಿಗೆ ಶೇ.೭೫ ರಷ್ಟು ಮೀಸಲಾತಿ ನೀಡಿ ಹೊಸ ಶಕೆಗೆ ಮುನ್ನುಡಿಯನ್ನಿಟ್ಟರು. ಆದ್ದರಿಂದ ನಾವು ಯದುವಂಶಸ್ಥ ರಾಜರ ಕುಟುಂಬವನ್ನು ಗೌರವಿಸುತ್ತೇವೆ ಎಂದರು.

ನಮ್ಮ ಸಿದ್ದಾರ್ಥ ಶಿಕ್ಷಣ ಸಂಸ್ಥೆಯಲ್ಲಿ ನಮ್ಮ ತಂದೆಗೆ ಪ್ರೀತಿ ಪಾತ್ರರಾಗಿ, ನಮ್ಮ ಕುಟುಂಬಕ್ಕೆ ಮೂರನೇ ಮಗನಾಗಿ ಒಳ್ಳೆಯ ಕೆಲಸಗಳನ್ನು ಪ್ರೊ.ಮಹದೇವ ಭರಣಿ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಪರಮೇಶ್ವರ್ ಟ್ರಸ್ಟ್‌ಗೆ ಹತ್ತು ಲಕ್ಷ ಸಹಾಯಧನ ನೀಡುವುದಾಗಿ ಘೋಷಿಸಿದರು.

ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಸರಳ ಸಜ್ಜನಿಕೆಯ ರಾಜಕಾರಣಿ ಡಾ.ಜಿ.ಪರಮೇಶ್ವರ್ ಸಾಧನೆ ಬಹಳ ದೊಡ್ಡದು. ಬಂಡಿಪುರ ಅರಣ್ಯದೊಳಗಿನ ಹೆದ್ದಾರಿಗಳಲ್ಲಿ ವಾಹನಗಳ ರಾತ್ರಿ ಸಂಚಾರಕ್ಕೆ ಯಾವಾಗಲೂ ನಮ್ಮ ವಿರೋಧವಿದೆ. ಪ್ರಾಣಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದರು.

ಸಮಾರಂಭದಲ್ಲಿ ಮನೋರಖ್ಖಿತ ಬಂತೇಜಿ, ನಿವೃತ್ತ ಐಎಫ್‌ಎಸ್ ಅಧಿಕಾರಿ ಡಾ.ಆರ್.ರಾಜು, ಪ್ರೊ.ಮಹದೇವಭರಣಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಅಧಿಕ್ಷಕರಾದ ಆನಂದಕುಮಾರ್, ಎಸ್‌ಪಿ ಡಾ.ಬಿ.ಟಿ.ಕವಿತಾ, ಕಲಬುರಗಿ ವಿವಿಯ ಪ್ರಾಧ್ಯಾಪಕ ಡಾ.ಎಚ್.ಸಿ.ಪೋತೆ, ಸಿದ್ದಾರ್ಥ ವಿ.ವಿಯ ಕುಲ ಸಚಿವ ಗುರುಶಂಕರ್, ಕೀಲುಮೋಳೆ ತಜ್ಞ ವೈದ್ಯ ಡಾ.ಕಿರಣ್ ಕಾಳಯ್ಯ, ಡಾ.ಗುರುಲಿಂಗಯ್ಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಂಟಿ ನಿರ್ದೇಶಕರಾದ ಲಕ್ಷಮ್ಮ, ಉದ್ಯಮಿ ಚಿದಾನಂದ, ಸಾಹಿತಿ ಕಾಳಿಂಗಸ್ವಾಮಿ ಸಿದ್ದಾರ್ಥ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

5 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

5 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

6 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

7 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

8 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago