ಚಾಮರಾಜನಗರ

ಕಾರ್ಯಕರ್ತರ ಪ್ರೀತಿ-ವಿಶ್ವಾಸವೇ ನನಗೆ ಶ್ರೀರಕ್ಷೆ : ಆರ್.ನರೇಂದ್ರ

ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಆರ್.ನರೇಂದ್ರ ಅಭಿಪ್ರಾಯ

ಹನೂರು: ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ಆರ್.ನರೇಂದ್ರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು, ಕಾರ್ಯಕರ್ತರು, ಮುಖಂಡರು ಸರಳವಾಗಿ ಆಚರಿಸಿದರು.

ಈ ವೇಳೆ ಸನ್ಮಾನ ಸ್ವೀಕರಿಸಿದ ಬಳಿಕ ಮಾಜಿ ಶಾಸಕ ಆರ್.ನರೇಂದ್ರ ಮಾತನಾಡಿ, ನಾನು ಇದುವರೆಗೂ ಆಡಂಬರದ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡಿಲ್ಲ. ಪಕ್ಷದ ಅಭಿಮಾನಿಗಳು , ಕಾರ್ಯಕರ್ತರ ಪ್ರೀತಿ-ವಿಶ್ವಾಸ, ಶುಭ ಹಾರೈಕೆಯೇ ನನಗೆ ಶ್ರೀರಕ್ಷೆಯಾಗಿದೆ ಎಂದರು.

ಹನೂರು ಕ್ಷೇತ್ರದ ಜನರು ನಮ್ಮ ಕುಟುಂಬಕ್ಕೆ ೬೦ ವರ್ಷಗಳ ಕಾಲ ಅಧಿಕಾರ ನೀಡಿ ಅವರ ಸೇವೆಯನ್ನು ಮಾಡುವ ಅವಕಾಶವನ್ನು ಮಾಡಿಕೊಟ್ಟಿದ್ದಾರೆ. ನಾನು ಕೂಡ ನಮ್ಮ ತಂದೆ ಹಾಗೂ ದೊಡ್ಡಪ್ಪನವರ ಹಾದಿಯಲ್ಲಿಯೇ ಕ್ಷೇತ್ರದ ಜನರ ಸೇವೆ ಮುಂದುವರಿಸಿಕೊಂಡು ಬಂದಿದ್ದೇನೆ. ಮೂರು ಅವಧಿಯಲ್ಲಿ ಶಾಸಕನಾಗಿ, ನಿಗಮ ಮಂಡಳಿ ಅಧ್ಯಕ್ಷನಾಗಿ ಸಾವಿರಾರು ಕೋಟಿ ರೂ. ಅನುದಾನ ತರುವ ಮೂಲಕ ಕ್ಷೇತ್ರದ ಅಭಿವೃದ್ಧಿ ಮಾಡಿದ್ದೇನೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಕೆ-ಶಿಪ್ ರಸ್ತೆ, ವಸತಿ ಶಾಲೆಗಳು, ಆಸ್ಪತ್ರೆಗಳು ಇನ್ನಿತರ ಕೆಲಸ ಕಾರ್ಯಗಳು ಇತಿಹಾಸ ಪುಟಗಳಲ್ಲಿ ಸೇರುವಂತೆ ಮಾಡಿರುವುದು ಸಂತಸದ ವಿಚಾರ ಎಂದರು.

ಕ್ಷೇತ್ರದ ಜನರ ಸೇವೆಗಾಗಿಯೇ ನನ್ನ ಸಮಯವನ್ನು ಮೀಸಲಿಟ್ಟಿದ್ದೇನೆ. ಕ್ಷೇತ್ರದ ಜನತೆ ನನ್ನನ್ನು ಮೂರು ಬಾರಿ ಶಾಸಕನಾಗಿ ಆಯ್ಕೆ ಮಾಡುವ ಮೂಲಕ ಜೀವನದಲ್ಲಿ ಮರೆಯದ ಕ್ಷಣಗಳನ್ನು ತಂದು ಕೊಟ್ಟಿದ್ದಾರೆ. ಕಳೆದ ಚುನಾವಣೆಯಲ್ಲಿ ಸಣ್ಣಪುಟ್ಟ ವ್ಯತ್ಯಾಸದಿಂದ ಸೋಲುಂಟಾಗಿದೆ. ಆದರೂ ಕ್ಷೇತ್ರದ ಜನರು ಲೋಕಸಭಾ ಚುನಾವಣೆಯಲ್ಲಿ ಆ ನೋವನ್ನು ಮರೆಸಿದ್ದಾರೆ. ಹನೂರು ಪ್ರಾಥಮಿಕ ಕೃಷಿ ಪರಿಷತ್ತಿನ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹಾಗೂ ನನ್ನನ್ನು ಆಯ್ಕೆ ಮಾಡಲು ಹಗಲಿರುಳು ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶಕ್ತಿ ತುಂಬಿದ್ದಾರೆ. ನಿಮ್ಮ ಅಭಿಮಾನ, ವಿಶ್ವಾಸಕ್ಕೆ ಸದಾ ಋಣಿಯಾಗಿರುತ್ತೇನೆ ಎಂದರು.

ಪಟ್ಟಣ ಪಂಚಾಯಿತಿ ಸದಸ್ಯರಾದ ಗಿರೀಶ್, ಹರೀಶ್, ನವೀನ್ ಸೋಮಶೇಖರ್, ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಸಿ.ಮಾದೇಶ್, ರಾಮಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಮಾದೇಶ್, ರಾಮಾಪುರ ಬ್ಲಾಕ್ ಕಾಂಗ್ರೆಸ್ ಯೂಥ್ ಅಧ್ಯಕ್ಷ ರಮೇಶ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ರಾಚಯ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸಿದ್ದರಾಜು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಅಶೋಕ್, ರಾಮಾಪುರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಾಮಲಿಂಗಂ, ಹನೂರು ಪಿಎಸಿಸಿ ಅಧ್ಯಕ್ಷ ಅನಿಲ್ ಕುಮಾರ್, ಮುಖಂಡರಾದ ಮಾದೇಶ್, ಸೋಮಶೇಖರ್, ಎಲ್.ನಾಗೇಂದ್ರ, ಪ್ರವೀಣ್ ಕುಮಾರ್, ವಾಜಿದ್ ಖಾನ್, ಶಿವಕುಮಾರ್, ರಾಜು, ಆಟೋ ರಾಜೇಶ್, ಮಲ್ಲೇಶ್, ಎಲ್. ರಾಜೇಂದ್ರ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…

43 mins ago

ಬಾಗಲಕೋಟೆ ಉಪಚುನಾವಣೆ : ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…

1 hour ago

ಆಕ್ರಮಣ ತಡೆಯಲು ಸಿದ್ದ : ಅಮೆರಿಕಗೆ ಕ್ಯೂಬಾ ಎಚ್ಚರಿಕೆ

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…

1 hour ago

ಹನೂರು | ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿದ ಶಾಸಕ ಮಂಜುನಾಥ್‌

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…

2 hours ago

ನ್ಯೂಯಾರ್ಕ್‌ | ಲ್ಯಾಂಡಿಂಗ್‌ ವೇಳೆ ಟ್ರಕ್‌ಗೆ ವಿಮಾನ ಡಿಕ್ಕಿ : ಇಬ್ಬರು ಸಾವು

ನ್ಯೂಯಾರ್ಕ್‌ : ಲ್ಯಾಂಡಿಂಗ್‌ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…

2 hours ago

IPL | ಮೊದಲ ಪಂದ್ಯದಲ್ಲಿ ಆರ್‌ಸಿಬಿ-ಎಸ್‌ಆರ್‌ಎಚ್‌ ಮುಖಾಮುಖಿ

ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…

2 hours ago