ಚಾಮರಾಜನಗರ : ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36000 ಕೋಟಿ ರೂಪಾಯಿಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಚಾಮರಾಜನಗರ ಜಿಲ್ಲೆಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ಅಧಿಕಾರ ಮತ್ತು ಸಂಪತ್ತು ಸಮಾಜದ ಎಲ್ಲರಲ್ಲೂ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯ ಎಂದರು.
ಸಂವಿಧಾನದ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ. ಗ್ಯಾರಂಟಿಗಳನ್ನು ಕೊಟ್ಟಿದೆ. ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಿದ ಏಕೈಕ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ನಮ್ಮ ಐದು ಗ್ಯಾರಂಟಿಗಳಿಗೆ ನಾಲ್ಕೂವರೆ ಕೋಟಿ ಜನರು ಫಲಾನುಭವಿಗಳಾಗಿದ್ದಾರೆ. ರಾಜ್ಯದ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 45 ಸಾವಿರದಿಂದ 50 ಸಾವಿರ ರೂಪಾಯಿ ಕೊಡುತ್ತಿದ್ದೇವೆ. ಇದನ್ನು ಬಿಜೆಪಿ ಯಾಕೆ ವಿರೋಧಿಸುತ್ತಿದೆ? ನಾಡಿನ ಜನರಿಗೆ ಸರ್ಕಾರದ ಸವಲತ್ತುಗಳು ಸಿಗಬಾರದಾ? ಎಂದು ಪ್ರಶ್ನಿಸಿದರು.
ಒಂದು ಕೋಟಿ ಇಪ್ಪತ್ತು ಲಕ್ಷ ಕುಟುಂಬಗಳ, ನಾಲ್ಕೂವರೆ ಕೋಟಿ ಜನಕ್ಕೆ ಈ ವರ್ಷ 36000 ಕೋಟಿ ಹಣ ಕೊಟ್ಟಿದ್ದೇವೆ. ಮುಂದಿನ ವರ್ಷಕ್ಕೆ 59000 ಕೋಟಿ ರೂಪಾಯಿಗಳನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದೇವೆ. ರಾಜ್ಯದ ಜನರ ಅಭಿವೃದ್ಧಿ ಕಾರ್ಯಗಳಿಗೆ ಒಂದು ಲಕ್ಷ ಇಪ್ಪತ್ತು ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಘೋಷಿಸಿದ್ದೇವೆ ಎಂದರು.
ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ : ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗುತ್ತದೆ ಎನ್ನುವ ಮೂಡನಂಬಿಕೆ ಜಿಲ್ಲೆಯ ಜನರಿಗೆ ಮಾಡುವ ಅವಮಾನ: ನಾನು ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ ಎಂದರು.
ಮನುವಾದ ನಮ್ಮೆಲ್ಲರ ಶತ್ರು ಎಚ್ಚರ : ಸಂವಿಧಾನ ಬದಲಾಯಿಸುತ್ತೇವೆ ಎನ್ನುತ್ತಿರುವ ಮನುವಾದಿಗಳು ಮತ್ತು ಮನುವಾದ ನಮ್ಮ ನಿಮ್ಮೆಲ್ಲರ ಶತ್ರು. ಇವರಿಗೆ ಸಂವಿಧಾನ ಬದಲಾಯಿಸಲು ಅವಕಾಶ ಆಗದಂತೆ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿ. ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನನಗೆ ಶಕ್ರಿ ತುಂಬಿ ಎಂದು ವಿನಂತಿಸಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸೇರಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರುಗಳು ಮತ್ತು ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…
ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…