ಚಾಮರಾಜನಗರ : ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36000 ಕೋಟಿ ರೂಪಾಯಿಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಚಾಮರಾಜನಗರ ಜಿಲ್ಲೆಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ಅಧಿಕಾರ ಮತ್ತು ಸಂಪತ್ತು ಸಮಾಜದ ಎಲ್ಲರಲ್ಲೂ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯ ಎಂದರು.
ಸಂವಿಧಾನದ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ. ಗ್ಯಾರಂಟಿಗಳನ್ನು ಕೊಟ್ಟಿದೆ. ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಿದ ಏಕೈಕ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ನಮ್ಮ ಐದು ಗ್ಯಾರಂಟಿಗಳಿಗೆ ನಾಲ್ಕೂವರೆ ಕೋಟಿ ಜನರು ಫಲಾನುಭವಿಗಳಾಗಿದ್ದಾರೆ. ರಾಜ್ಯದ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 45 ಸಾವಿರದಿಂದ 50 ಸಾವಿರ ರೂಪಾಯಿ ಕೊಡುತ್ತಿದ್ದೇವೆ. ಇದನ್ನು ಬಿಜೆಪಿ ಯಾಕೆ ವಿರೋಧಿಸುತ್ತಿದೆ? ನಾಡಿನ ಜನರಿಗೆ ಸರ್ಕಾರದ ಸವಲತ್ತುಗಳು ಸಿಗಬಾರದಾ? ಎಂದು ಪ್ರಶ್ನಿಸಿದರು.
ಒಂದು ಕೋಟಿ ಇಪ್ಪತ್ತು ಲಕ್ಷ ಕುಟುಂಬಗಳ, ನಾಲ್ಕೂವರೆ ಕೋಟಿ ಜನಕ್ಕೆ ಈ ವರ್ಷ 36000 ಕೋಟಿ ಹಣ ಕೊಟ್ಟಿದ್ದೇವೆ. ಮುಂದಿನ ವರ್ಷಕ್ಕೆ 59000 ಕೋಟಿ ರೂಪಾಯಿಗಳನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದೇವೆ. ರಾಜ್ಯದ ಜನರ ಅಭಿವೃದ್ಧಿ ಕಾರ್ಯಗಳಿಗೆ ಒಂದು ಲಕ್ಷ ಇಪ್ಪತ್ತು ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಘೋಷಿಸಿದ್ದೇವೆ ಎಂದರು.
ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ : ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗುತ್ತದೆ ಎನ್ನುವ ಮೂಡನಂಬಿಕೆ ಜಿಲ್ಲೆಯ ಜನರಿಗೆ ಮಾಡುವ ಅವಮಾನ: ನಾನು ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ ಎಂದರು.
ಮನುವಾದ ನಮ್ಮೆಲ್ಲರ ಶತ್ರು ಎಚ್ಚರ : ಸಂವಿಧಾನ ಬದಲಾಯಿಸುತ್ತೇವೆ ಎನ್ನುತ್ತಿರುವ ಮನುವಾದಿಗಳು ಮತ್ತು ಮನುವಾದ ನಮ್ಮ ನಿಮ್ಮೆಲ್ಲರ ಶತ್ರು. ಇವರಿಗೆ ಸಂವಿಧಾನ ಬದಲಾಯಿಸಲು ಅವಕಾಶ ಆಗದಂತೆ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿ. ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನನಗೆ ಶಕ್ರಿ ತುಂಬಿ ಎಂದು ವಿನಂತಿಸಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸೇರಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರುಗಳು ಮತ್ತು ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…
ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…
ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…