ಚಾಮರಾಜನಗರ

ಹನೂರು: ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದ ಶಿಕ್ಷಕ ಮನೋಜ್‌ ಕುಮಾರ್‌ ನೇತೃತ್ವದ ತಂಡ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಪಟ್ಟಣದ ಕ್ರಿಸ್ತರಾಜ ಶಾಲೆಯ ಶಿಕ್ಷಕ ಮನೋಜ್ ಕುಮಾರ್.ಪಿ. ಅವರು ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನು ಪಡೆಯುವಲ್ಲಿ ತಮ್ಮ ತಂಡದಲ್ಲಿ ಪ್ರಮುಖ ಪಾತ್ರವಹಿಸಿ ಗ್ರಾಮ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ.

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಆರ್ ಡಿ ಸಿ, ಎಸ್ಎನ್ಐಸಿ ಶಿಬಿರಗಳಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದ್ದ ಇವರು ವಾಯುದಳ ಎನ್‌ಸಿಸಿ ವಿಭಾಗದ ಸೆಕೆಂಡ್ ಆಫೀಸರ್ ಆಗಿ ಅತಿ ಹೆಚ್ಚು ಅಂಕಗಳೊಂದಿಗೆ ಸತತ ಎರಡನೇ ಬಾರಿಗೆ ಪ್ರಧಾನ ಮಂತ್ರಿ ಆರ್.ಡಿ.ಸಿ ಬ್ಯಾನರ್ ಅನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ದೆಹಲಿಯಲ್ಲಿ ನಡೆದ ಆರ್ ಡಿ ಸಿ, ಎಸ್ಎನ್ಐಸಿ ಶಿಬಿರಗಳಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದಿಂದ ವಿವಿಧ ಜಿಲ್ಲೆಗಳ ಸುಮಾರು 128 ಆರ್ಮಿ, ನೌಕಾದಳ ಮತ್ತು ವಾಯುಸೇನೆಯ ಕ್ಯಾಡೆಟ್ ಗಳು ಭಾಗವಹಿಸಿ ಕಠಿಣ ಪರಿಶ್ರಮದಿಂದ ಡ್ರಿಲ್, ವ್ಯಾಪೆನ್ ಟ್ರೇನಿಂಗ್, ಫೈರಿಂಗ್, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇಶದ ಒಟ್ಟಾರೆ 17 ನಿರ್ದೇಶನಾಲಯಗಳ ನಡುವೆ ಅತ್ಯಧಿಕ ಅಂಕಗಳೊಂದಿಗೆ ಈ ಸಾಧನೆ ಗೈದಿದ್ದಾರೆ.

ಈ ಯಶಸ್ಸಿಗೆ ಕಾರಣಿಕರ್ತರಾದ ಎಲ್ಲಾ ಕೆಡೆಟ್ ಗಳು, ತರಬೇತಿ ನೀಡಿದ ವಿವಿಧ ಘಟಕಗಳ ಅಧಿಕಾರಿಗಳಿಗೂ ಹಾಗೂ ಪ್ರೋತ್ಸಾಹ ನೀಡಿದ ವಿವಿಧ ವಿದ್ಯಾಸಂಸ್ಥೆಗಳಿಗೂ ಮನೋಜ್ ಕುಮಾರ್.ಪಿ.ಅವರು ಕೃತಜ್ಞತೆ ಮತ್ತು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ಶಿಬಿರದ ರ್ಯಾಲಿಯಲ್ಲಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕ್ಯಾಡೆಟ್ ಗಳನ್ನು ಉದ್ದೇಶಿಸಿ ಪ್ರಶಂಸೆ ಮತ್ತು ಪ್ರೇರಣಾತ್ಮಕ ಭಾಷಣವನ್ನು ನೀಡಿದ್ದು, ವಿಜೇತರನ್ನು ಅಭಿನಂದಿಸಿದ್ದಾರೆ. ಈ ಒಂದು ಕಾರ್ಯಕ್ರಮದಲ್ಲಿ ರಕ್ಷಣಾ ಮಂತ್ರಿಗಳು, ಎಲ್ಲಾ ಸಶಸ್ತ್ರ ಪಡೆಗಳ ಮುಖ್ಯಸ್ಥರು ಹಾಗೂ ಎನ್‌ಸಿಸಿಯ ಪ್ರಧಾನ ಅಧಿಕಾರಿಗಳು ಉಪಸ್ಥಿತರಿದ್ದರು.

ಅಭಿನಂದನೆಗಳ ಮಹಾಪೂರ: ವಿಶೇಷವೆಂದರೆ ನಮ್ಮ ಚಾಮರಾಜನಗರ ಜಿಲ್ಲೆಯ ಬಿ. ಗುಂಡಾಪುರ ಗ್ರಾಮದ ಹಾಗೂ ಕ್ರಿಸ್ತರಾಜ ಶಾಲೆಯ ಶಿಕ್ಷಕರಾದ ಮನೋಜ್ ಕುಮಾರ್ ಪಿ ರವರು ವಾಯುದಳ ಎನ್‌ಸಿಸಿ ವಿಭಾಗದ ಸೆಕೆಂಡ್ ಆಫೀಸರ್ ಆಗಿದ್ದು, ಈ ಒಂದು ಶಿಬಿರದಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿ ವಿಜೇತರಾಗಿ ಗ್ರಾಮಕ್ಕೆ ಆಗಮಿಸಿದ ವೇಳೆ ಗ್ರಾಮಸ್ಥರು ಹಾಗೂ ಕ್ರಿಸ್ತರಾಜ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕರಾದ ಫಾದರ್ ರೋಷನ್ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

10 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

10 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

10 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

10 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

10 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

10 hours ago