ಚಾಮರಾಜನಗರ

ಲಂಡನ್‌ನಲ್ಲಿ ಕಾನೂನು ಪದವಿ ಪಡೆದ ರೈತನ ಪುತ್ರಿಯ ವಿವಾಹಕ್ಕೆ ಹೊಲ‍‍‍ವೇ ಚಪ್ಪರ!

  • ಮಾವು, ಹಲಸಿನ ಮರದಡಿ ವಿವಾಹಶಾಸ್ತ್ರ
  • ಹೊಲದಲ್ಲಿ ಸಿಗುವ ಬಗೆ ಬಗೆಯ ಸೊಪ್ಪುಗಳಿಂದ ಅಲಂಕಾರ ಜೂನ್ ಎರಡರಂದು ವಿವಾಹ

ಹನೂರು : ತಾಲೂಕಿನ ಮಹದೇಶ್ವರ ಬೆಟ್ಟ ವನ್ಯಧಾಮದ ನಿಸರ್ಗದ ಮಡಿಲಿನಲ್ಲಿ ಹತ್ತಾರು ಎಕರೆ ಕೃಷಿ ಭೂಮಿಯಲ್ಲಿ ಕೃಷಿ, ತೋಟಗಾರಿಕೆ , ಹೈನುಗಾರಿಕೆ, ಮೀನುಗಾರಿಕೆ, ಜೇನು ಸಾಕಾಣೆ, ರೇಷ್ಮೆ, ಪುಷ್ಪ ಹಾಗೂ ಅರಣ್ಯ ಕೃಷಿಯನ್ನು ಮಾಡುವ ಮೂಲಕ ತಮ್ಮ ಜಮೀನನ್ನು ಕೃಷಿ ಪ್ರವಾಸೋದ್ಯಮ ಕ್ಷೇತ್ರವನ್ನಾಗಿಸಿರುವ ಪ್ರಗತಿ ಪರ ರೈತರೊಬ್ಬರು ಲಂಡನ್‌ನಲ್ಲಿ ಕಾನೂನು ಪದವಿ ಪಡೆದಿರುವ ಪುತ್ರಿ ಮದುವೆಯನ್ನು ಹೊಲದಲ್ಲಿ ನಡೆಸಲಿದ್ದಾರೆ.

ರೈತ ಬರೀ ಬೆ‍ಳೆ ಬೆಳೆಯುತ್ತಾ ಕುಳಿತರೆ ಸಾಲದು, ತನ್ನ ಕೃಷಿ ಚಟುವಟಿಕೆಯನ್ನು ಪ್ರತಿಯೊಬ್ಬರಿಗೂ ಪರಿಚಯಿಸಬೇಕು. ಅದರ ಮೂಲಕ ರೈತನ ಕೃಷಿ ಭೂಮಿಯೂ ಕೃಷಿ ಪ್ರವಾಸೋದ್ಯಮ ತಾಣವಾಗಬೇಕು ಎಂಬ ಪರಿಕಲ್ಪನೆ ಹುಟ್ಟು ಹಾಕಿ, ಕಿಸಾನ್‌ ಅಗ್ರೋ ಟೂರಿಸಂ ಡೆವಲಪ್ಮೆಂಟ್‌ ಕಂಪನಿ ಮೂಲಕ ರೈತರನ್ನು ಕೃಷಿ
ಪ್ರವಾಸೋದ್ಯಮಿಗಳಾಗಿಸಲು ಹೊರಟಿರುವ ಗಡಿ ಜಿಲ್ಲೆ ಚಾಮರಾಜನಗರದ ಚಿಂಚಳ್ಳಿಯ ರೈತ ಪಿ. ದಯಾನಂದ್‌ ಅವರು ತಮ್ಮ ಪುತ್ರಿ ವಿವಾಹವನ್ನುತಮ್ಮ ಹೊಲದಲ್ಲೇ ಏರ್ಪಡಿಸಿದ್ದಾರೆ.

ತಮ್ಮ ಹೊಲವನ್ನು ನಿಸರ್ಗದ ಮಡಿಲಿನಂತೆ ಸೃಷ್ಠಿ ಮಾಡಿದ್ದು, ಅಲ್ಲಿ ಏನುಂಟು ಏನಿಲ್ಲ ಎಂಬುವಂತೆ ಅಳಿವಿನಂಚಿನಲ್ಲಿರುವ ಸಸ್ಯಗಳನ್ನು ಎಲ್ಲೆಡೆಯಿಂದ ಸಂಗ್ರಹಿಸಿ ತಂದು, ಸಂರಕ್ಷಣೆ ಮಾಡುವ ಮೂಲಕ ಹೊಲದಲ್ಲೇ ಕಾಡನ್ನೇ ಬೆಳೆಸಿದ್ದಾರೆ. ಅಲ್ಲಿ ದುಂಬಿಗಳ ಜೈಂಕಾರ, ಚಿಟ್ಟೆ ಪಕ್ಷಿಗಳ ಕಲರವ ಕೇಳುವಂತಹ ವಾತವರಣ ನಿರ್ಮಾಣಮಾಡಿದ್ದು, ಅಲ್ಲೇ ತಮ್ಮ ದ್ವೀತಿಯ ಪುತ್ರಿ ರಶ್ಮಿ ದಯಾನಂದ್‌ ಅವರನ್ನು ಬೆಂಗಳೂರಿನ ಕುಬೇರ್‌ ಅವರಿಗೆ ಧಾರೆ ಎರೆದುಕೊಡಲಿದ್ದಾರೆ.

ಕೃಷಿ ಪ್ರವಾಸೋದ್ಯಮದಲ್ಲಿ ಅಸಕ್ತಿ ಹೊಂದಿರುವ ಪಿ. ದಯಾನಂದ್‌ ಅವರು ಹಿಂದೆ ಮದುವೆಗಳು ಹಳ್ಳಿಯ ಮನೆಗಳಲ್ಲಿ ನೆಂಟರಿಷ್ಟರ ಸಮ್ಮುಖದಲ್ಲಿ ನಡೆಸುತ್ತಿದ್ದವು. ಇದೀಗ ನಮ್ಮ ಮಗಳ ಮದುವೆ ನಾನು ಹತ್ತಾರು ವರ್ಷಗಳಿಂದ ಶ್ರಮಪಟ್ಟು ನೆಟ್ಟಿರುವ ಮರಗಿಡಗಳು, ಪಕ್ಷಿಗಳ ಕಲರವ, ದುಂಬಿಯ ಜೈಕಾರದೊಂದಿಗೆ ಇಲ್ಲೇ ಸಿಗುವ ಸ್ಧಳೀಯ ಸಸ್ಯಗಳ ಅಲಂಕಾರರೊಂದಿಗೆ ನಡೆಯಲಿ.

ಮದುವೆಗೆ ಬರುವ ಬಂಧುಬಾಂಧವರಿಗೆ ಕೃಷಿ ಪ್ರವಾಸೋದ್ಯಮವೂ ಆಗಲಿ, ತೋಟಗಾರಿಕೆ, ಕೃಷಿ, ಹೈನುಗಾರಿಕೆ, ಮೀನುಗಾರಿಕೆ, ಜೇನು ಸಾಕಾಣೆ, ರೇಷ್ಮೆ, ಹಾಗೂ ಅರಣ್ಯ ಕೃಷಿಯನ್ನು ನೋಡಿ ಸಂಭ್ರಮಿಸುವ ಮೂಲಕ ಮದುವೆಯಲ್ಲಿ ಭಾಗಿಯಾಗಲಿ ಎಂಬ ಉದ್ದೇಶದಿಂದ ಹೊಲದಲ್ಲೇ ಮಾವು ಹಲಸಿನ ಮರದಡಿ ವಿವಾಹ ನಡೆಸುತ್ತಿದ್ದೇವೆ. ಇದೇ ನಮ್ಮ ಮಗಳು ಮತ್ತು ಅಳಿಯನ ಆಶಯವಾಗಿತ್ತು ಎನ್ನುತ್ತಾರೆ ದಯಾನಂದ್‌.

ಮದುವೆಗೆ ಬರುವವರು ಸಾವಿರಾರು ಸಸ್ಯ ವರ್ಗಗಳ ಜೊತೆಗೆ ಹತ್ತಾರು ಬೆಳೆ ನೋಡಬಹುದಾಗಿದ್ದು, ನೂರಾರು ಬಗೆ ಬಗೆಯ ಹಣ್ಣುಗಳನ್ನು ಸವಿಯಬಹುದಾಗಿದೆ. ಬರಗೂರ್, ಹಳ್ಳಿಕಾರ್, ತಳಿ ಹಸುಗಳು,ಕುರಿ ಕೋಳಿ, ಮೇಕೆ ಹಾಗೂ ಕತ್ತೆಗಳನ್ನು ಸಾಕುತ್ತಿರುವುದನ್ನು ನೋಡಬಹುದು.

ಎಣ್ಣೆ ಘಟಕ, ಸುಗಂಧ ತಯಾರಿಕಾ ಘಟಕವೂ ಇಲ್ಲಿದ್ದು, ತೋಟಕ್ಕೆ ಭೇಟಿ ನೀಡುವವರಿಗೆ ಕೃಷಿ ತಿಳುವಟಿಕೆ ಮೂಡಿಸಬೇಕು ಎಂಬ ಉದ್ದೇಶದಿಂದ ವಿವಿಧ ಬಗೆಯ ಪರಿಕರಗಳ ಜೊತೆಗೆ ಎತ್ತಿನ ಗಾಡಿ, ಕುದುರೆಗಾಡಿ, ವಿವಿಧ ಮಾದರಿಯ ಸ್ಕೂಟರ್‌ ಮತ್ತು ಕಾರುಗಳನ್ನು ಪ್ರದರ್ಶನಕ್ಕಿಟ್ಟಿದ್ದಾರೆ.

ಹಳ್ಳಿಗಾಡಿನವರೇ ಸಾಲ ಸೋಲವಾದ್ರು ಸರಿ ಎಂದು ದೊಡ್ಡ ದೊಡ್ಡ ನಗರಿ, ವಿದೇಶದಲ್ಲಿ ಮದುವೆ ಮಾಡಿಸುವ ಈ ಕಾಲದಲ್ಲಿ ಲಂಡನ್‌ನಲ್ಲಿ ವ್ಯಾಸಂಗ ಮುಗಿಸಿರುವ ಪುತ್ರಿ ವಿವಾಹವನ್ನು ಹನೂರು ತಾಲೂಕಿನ ಚಿಂಚಹಳ್ಳಿ ಗ್ರಾಮದ ರೈತ ಪಿ. ದಯಾನಂದ್‌ ಅವರು ಶ್ರಮಪಟ್ಟು ಬೆಳೆಸಿರುವ ಸಾವಿರಾರು ಸಸ್ಯೆ ಕಾಶಿಯ ನಡುವೆ ಸಿಗುವ ಬಗೆ ಬಗೆಯ ಸೊಪ್ಪುಗಳಿಂದ ಅಲಂಕಾರಮಾವು, ಹಲಸಿನ ಮರದಡಿ ಚಪ್ಪರ ನಿರ್ಮಿಸಿ ಪುತ್ರಿ ವಿವಾಹಶಾಸ್ತ್ರಕ್ಕೆ ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago