ಚಾಮರಾಜನಗರ

ಜಾನಪದ ಕಲೆ ಉಳಿಸುವ ಕೆಲಸ ನಿರಂತರವಾಗಿ ಸಾಗಬೇಕು: ಗುರುಲಿಂಗಯ್ಯ

ಹನೂರು: ನಮ್ಮ ಭಾಗದ ಮೂಲ ಜಾನಪದ ಕಲೆಗಳಾದ ರಾಗಿಕಲ್ಲು ಬೀಸುಪದ,ತಂಬೂರಿ ಪದ ಇನ್ನಿತರೆ ಕಲೆಗಳನ್ನು ಉಳಿಸಿ ಬೆಳೆಸುವ ಕೆಲಸ ನಿರಂತರವಾಗಿ ಸಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಅಭಿಪ್ರಾಯಪಟ್ಟರು .

ತಾಲೂಕಿನ ಹನೂರು ಶೈಕ್ಷಣಿಕ ವಲಯದ ಬಂಡಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಚಾಮರಾಜನಗರ ಜಿಲ್ಲೆಯ ಸಾಂಸ್ಕೃತಿಕ ರಾಯಭಾರಿಗಳಾದ ಮಹದೇಶ್ವರರು,ಮಂಟೇಸ್ವಾಮಿ, ಸಿದ್ದಪ್ಪಾಜಿ ರವರ ಕುರಿತಾದ ಜಾನಪದ ಕಾವ್ಯಗಳ ಕುರಿತು ಇಂದಿನ ಮಕ್ಕಳಿಗೆ ತಿಳಿಸಿಕೊಡುವ ಅವಶ್ಯಕತೆ ಇದ್ದು, ಮಕ್ಕಳು ಕಲಿತು ಮುಂದಿನ ಪೀಳಿಗೆಗೆ ಇಂತಹ ಅತ್ಯುತ್ತಮ ಸಂಸ್ಕೃತಿಯನ್ನು ನೀಡಬೇಕು ಎಂದರು.

ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರ ತರಲು ಶಿಕ್ಷಕರು ಶ್ರಮವಹಿಸಿದರೆ, ಪ್ರತಿಭೆಗಳನ್ನು ಸಮಾಜಕ್ಕೆ ನೀಡಬಹುದು, ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ತೋರ್ಪಡಿಸಬೇಕು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪೋಷಕರು ಸಹಕಾರ ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕ್ಲಸ್ಟರ್ ನ ವಿವಿಧ ಶಾಲೆಯ ಮಕ್ಕಳಿಗೆ ಪ್ರಶಸ್ತಿ ಪತ್ರ ನೆನಪಿನ ಕಾಣಿಕೆ ನೀಡುವ ಮೂಲಕ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಗುರುಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಮಲ್ಲು , ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರಾದ ಮುನಿಯನಾಯಕ,ಸಿ. ಆರ್. ಪಿ ದೊಡ್ಡಸಿದ್ದಶೆಟ್ಟಿ, ಜೆ ಎಸ್ ಎಸ್ ಶಾಲೆಯ ಮುಖ್ಯಶಿಕ್ಷಕರು,ವಿವಿಧ ಶಾಲೆಯ ಮುಖ್ಯ ಶಿಕ್ಷಕರು, ತೀರ್ಪುಗಾರರು ಮಕ್ಕಳು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago