ಚಾಮರಾಜನಗರ

ಚಾ.ನಗರ ಜಿಲ್ಲೆಯ ವಿವಿಧೆಡೆ ಕಳವು ; 14 ಮಂದಿ ಬಂಧನ

ಚಾಮರಾಜನಗರ : ಜಿಲ್ಲೆಯ ವಿವಿಧೆಡೆ ಮನೆಗಳ್ಳತನ, ಬೈಕ್ ಗಳ ಕಳವು ಮಾಡಿರುವುದಕ್ಕೆ ಸಂಬಂಧಿಸಿದಂತೆ ಒಂದು ತಿಂಗಳ ಅವಧಿಯಲ್ಲಿ ೧೪ ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು ೨೮೫ ಗ್ರಾಂ ಚಿನ್ನಾಭರಣ, ೪೫ ಗ್ರಾಂ ಬೆಳ್ಳಿ, ೨ ಓಮ್ನಿ ವಾಹನ , ೧೦ ಬೈಕ್‌ಗಳು ಹಾಗೂ ೫೫ ಸಾವಿರ ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ಹೊಂಗನೂರು ಗ್ರಾಮದ ಬಂಗಾರ ಸ್ವಾಮಿ, ವಿವೇಕ್, ಅಭಿ, ಕಾಗಲವಾಡಿ ಮುಬಾರಕ್, ಕೆಂಗಾಕಿ ಬಸವರಾಜು, ಅಮಚವಾಡಿ ಸಿದ್ದರಾಜು, ಯಳಂದೂರು ತಾಲ್ಲೂಕಿನ ಬೀಚಹಳ್ಳಿ ಪ್ರವೀಣ್ ಕುಮಾರ್, ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲದ ನಟೇಶ್, ಬೆಂಗಳೂರಿನ ಚಂದ್ರಪ್ಪ, ಸಂತೋಷ್ , ಮುಬಾರಕ್ ಹಾಗೂ ಇಬ್ಬರು ಬಾಲ ಆರೋಪಿಗಳು ಒಳಗೊಂಡಂತೆ ೧೪ ಮಂದಿಯನ್ನು ದಸ್ತಗಿರಿ ಮಾಡಲಾಗಿದೆ.

ಇದನ್ನೂ ಓದಿ:-ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟದ್ದು : ಸಚಿವ ಚಲುವರಾಯಸ್ವಾಮಿ

ವಶಪಡಿಸಿಕೊಂಡಿರುವ ಈ ಎಲ್ಲದರ ಒಟ್ಟು ಮೌಲ್ಯ ೨೨,೨೩,೩೦೦ ರೂ. ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಅವರು ತಮ್ಮ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಆರೋಪಿಗಳ ಪೈಕಿ ಜಿಲ್ಲೆಯವರೇ ಹೆಚ್ಚು ಇದ್ದಾರೆ. ಅದರಲ್ಲೂ ೧೯, ೨೦, ೨೨ರ ವಯೋಮಾನದವರೂ ಇದ್ದಾರೆ. ಬಂಽತರಲ್ಲಿ ಹಳೆಯ ಪ್ರಕರಣದಲ್ಲಿ ಭಾಗಿಯಾದವರು, ಇದೇ ಮೊದಲ ಬಾರಿಗೆ ಕಳ್ಳತನ ಮಾಡಿದವರೂ ಇದ್ದಾರೆ. ಬಾಲ ಆರೋಪಿಗಳನ್ನು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗಿದೆ ಎಂದರು.

ಕೊಳ್ಳೇಗಾಲ ಗ್ರಾಮಾಂತರ ಠಾಣೆ, ಯಳಂದೂರು ಠಾಣೆಯಲ್ಲಿ ತಲಾ ೨, ರಾಮಾಪುರ, ಕುದೇರು, ಚಾಮರಾಜನಗರ ಪೂರ್ವ ಠಾಣೆಯಲ್ಲಿ ತಲಾ ೧, ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ೨, ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ೩ ಸೇರಿದಂತೆ ಒಟ್ಟು ೧೨ ಕಳವು ಪ್ರಕರಣಗಳಿಗೆ ಸಂಬಂಽಸಿದಂತೆ ಆರೋಪಿಗಳನ್ನು, ಕಳವು ಮಾಲನ್ನು ಜಿಲ್ಲಾ ಅಪರಾಧ ವಿಶೇಷ ದಳದವರು ಪತ್ತೆ ಹಚ್ಚಿದ್ದಾರೆ. ಕಾನೂನು ರೀತ್ಯಾ ಮುಂದಿನ ಕ್ರಮ ವಹಿಲಾಗಿದೆ ಎಂದು ಎಸ್ಪಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಡಿವೈಎಸ್ಪಿಗಳಾದ ಚಾಮರಾಜನಗರದ ಸ್ನೇಹರಾಜ್, ಕೊಳ್ಳೇಗಾಲದ ಧರ್ಮೇಂದ್ರ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

5 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

7 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

8 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

8 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

8 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

8 hours ago