ಚಾಮರಾಜನಗರ : ಜಿಲ್ಲೆಯ ವಿವಿಧೆಡೆ ಮನೆಗಳ್ಳತನ, ಬೈಕ್ ಗಳ ಕಳವು ಮಾಡಿರುವುದಕ್ಕೆ ಸಂಬಂಧಿಸಿದಂತೆ ಒಂದು ತಿಂಗಳ ಅವಧಿಯಲ್ಲಿ ೧೪ ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು ೨೮೫ ಗ್ರಾಂ ಚಿನ್ನಾಭರಣ, ೪೫ ಗ್ರಾಂ ಬೆಳ್ಳಿ, ೨ ಓಮ್ನಿ ವಾಹನ , ೧೦ ಬೈಕ್ಗಳು ಹಾಗೂ ೫೫ ಸಾವಿರ ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಚಾಮರಾಜನಗರ ತಾಲ್ಲೂಕಿನ ಹೊಂಗನೂರು ಗ್ರಾಮದ ಬಂಗಾರ ಸ್ವಾಮಿ, ವಿವೇಕ್, ಅಭಿ, ಕಾಗಲವಾಡಿ ಮುಬಾರಕ್, ಕೆಂಗಾಕಿ ಬಸವರಾಜು, ಅಮಚವಾಡಿ ಸಿದ್ದರಾಜು, ಯಳಂದೂರು ತಾಲ್ಲೂಕಿನ ಬೀಚಹಳ್ಳಿ ಪ್ರವೀಣ್ ಕುಮಾರ್, ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲದ ನಟೇಶ್, ಬೆಂಗಳೂರಿನ ಚಂದ್ರಪ್ಪ, ಸಂತೋಷ್ , ಮುಬಾರಕ್ ಹಾಗೂ ಇಬ್ಬರು ಬಾಲ ಆರೋಪಿಗಳು ಒಳಗೊಂಡಂತೆ ೧೪ ಮಂದಿಯನ್ನು ದಸ್ತಗಿರಿ ಮಾಡಲಾಗಿದೆ.
ಇದನ್ನೂ ಓದಿ:-ಸಿಎಂ ಬದಲಾವಣೆ ಹೈಕಮಾಂಡ್ಗೆ ಬಿಟ್ಟದ್ದು : ಸಚಿವ ಚಲುವರಾಯಸ್ವಾಮಿ
ವಶಪಡಿಸಿಕೊಂಡಿರುವ ಈ ಎಲ್ಲದರ ಒಟ್ಟು ಮೌಲ್ಯ ೨೨,೨೩,೩೦೦ ರೂ. ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಅವರು ತಮ್ಮ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಆರೋಪಿಗಳ ಪೈಕಿ ಜಿಲ್ಲೆಯವರೇ ಹೆಚ್ಚು ಇದ್ದಾರೆ. ಅದರಲ್ಲೂ ೧೯, ೨೦, ೨೨ರ ವಯೋಮಾನದವರೂ ಇದ್ದಾರೆ. ಬಂಽತರಲ್ಲಿ ಹಳೆಯ ಪ್ರಕರಣದಲ್ಲಿ ಭಾಗಿಯಾದವರು, ಇದೇ ಮೊದಲ ಬಾರಿಗೆ ಕಳ್ಳತನ ಮಾಡಿದವರೂ ಇದ್ದಾರೆ. ಬಾಲ ಆರೋಪಿಗಳನ್ನು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗಿದೆ ಎಂದರು.
ಕೊಳ್ಳೇಗಾಲ ಗ್ರಾಮಾಂತರ ಠಾಣೆ, ಯಳಂದೂರು ಠಾಣೆಯಲ್ಲಿ ತಲಾ ೨, ರಾಮಾಪುರ, ಕುದೇರು, ಚಾಮರಾಜನಗರ ಪೂರ್ವ ಠಾಣೆಯಲ್ಲಿ ತಲಾ ೧, ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ೨, ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ೩ ಸೇರಿದಂತೆ ಒಟ್ಟು ೧೨ ಕಳವು ಪ್ರಕರಣಗಳಿಗೆ ಸಂಬಂಽಸಿದಂತೆ ಆರೋಪಿಗಳನ್ನು, ಕಳವು ಮಾಲನ್ನು ಜಿಲ್ಲಾ ಅಪರಾಧ ವಿಶೇಷ ದಳದವರು ಪತ್ತೆ ಹಚ್ಚಿದ್ದಾರೆ. ಕಾನೂನು ರೀತ್ಯಾ ಮುಂದಿನ ಕ್ರಮ ವಹಿಲಾಗಿದೆ ಎಂದು ಎಸ್ಪಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಡಿವೈಎಸ್ಪಿಗಳಾದ ಚಾಮರಾಜನಗರದ ಸ್ನೇಹರಾಜ್, ಕೊಳ್ಳೇಗಾಲದ ಧರ್ಮೇಂದ್ರ ಹಾಜರಿದ್ದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…