ಚಾಮರಾಜನಗರ: ತಾಲ್ಲೂಕಿನ ಸಂತೆಮರಹಳ್ಳಿಯ ಮನೆಯೊಂದರಲ್ಲಿ ಹಾಡಹಗಲೇ ಕಳ್ಳತನ ಮಾಡಿದ್ದ ಆರೋಪಿಯನ್ನು ಕೃತ್ಯ ನಡೆದ ೨೪ ಗಂಟೆಯೊಳಗೆ ಸ್ಥಳೀಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಗರದ ಬಸವೇಶ್ವರ ಚಲನಚಿತ್ರ ಮಂದಿರದ ಹಿಂಭಾಗದ ಬಡಾವಣೆಯ ನಿವಾಸಿ ರಾಜೇಶ (೩೫) ಬಂಧಿತ ಆರೋಪಿ. ಸಂತೇಮರಹಳ್ಳಿ ಸಮುದಾಯ ಆರೋಗ್ಯ ಕೇಂದ್ರದ ಸ್ಟಾಫ್ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ನೇತ್ರಾವತಿ ಎಂಬುವರ ಮನೆಯಲ್ಲಿ ವಸತಿ ಗೃಹದ ಬೀಗ ಮುರಿದು ಒಡವೆ, ಟಿವಿ, ಸಿಲಿಂಡರ್ ಸೇರಿದಂತೆ ೩.೩೦ ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಬಂಧಿತ ಆರೋಪಿ ದೋಚಿದ್ದ.
ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ನೇತ್ರವತಿ ದೂರು ದಾಖಲಿಸಿದ್ದರು. ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮನಿ ಸಾಹು ಅವರ ನಿರ್ದೇಶನದ ತಂಡ ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಕಳುವಾಗಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಯಚರಣೆಯಲ್ಲಿ ಇನ್ಸ್ಪೆಕ್ಟರ್ ಬಸವರಾಜ್, ಸಬ್ ಇನ್ಸ್ಪೆಕ್ಟರ್ ಚಂದ್ರಹಾಸ್ ನಾಯಕ್, ಅಪರಾಧ ವಿಭಾಗದ ಪಿಎಸ್ಐ ಮಂಜುನಾಥ್, ಎಎಸ್ಐ ಎಂ.ಎಸ್.ಗಿರೀಶ್, ಸಿಬ್ಬಂದಿ ರಮೇಶ್, ಸುಂದ್ರಪ್ಪ, ಸುರೇಶ್ ಇತರರು ಹಾಜರಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…