ಚಾಮರಾಜನಗರ: ತಾಲ್ಲೂಕಿನ ಸಂತೆಮರಹಳ್ಳಿಯ ಮನೆಯೊಂದರಲ್ಲಿ ಹಾಡಹಗಲೇ ಕಳ್ಳತನ ಮಾಡಿದ್ದ ಆರೋಪಿಯನ್ನು ಕೃತ್ಯ ನಡೆದ ೨೪ ಗಂಟೆಯೊಳಗೆ ಸ್ಥಳೀಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಗರದ ಬಸವೇಶ್ವರ ಚಲನಚಿತ್ರ ಮಂದಿರದ ಹಿಂಭಾಗದ ಬಡಾವಣೆಯ ನಿವಾಸಿ ರಾಜೇಶ (೩೫) ಬಂಧಿತ ಆರೋಪಿ. ಸಂತೇಮರಹಳ್ಳಿ ಸಮುದಾಯ ಆರೋಗ್ಯ ಕೇಂದ್ರದ ಸ್ಟಾಫ್ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ನೇತ್ರಾವತಿ ಎಂಬುವರ ಮನೆಯಲ್ಲಿ ವಸತಿ ಗೃಹದ ಬೀಗ ಮುರಿದು ಒಡವೆ, ಟಿವಿ, ಸಿಲಿಂಡರ್ ಸೇರಿದಂತೆ ೩.೩೦ ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಬಂಧಿತ ಆರೋಪಿ ದೋಚಿದ್ದ.
ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ನೇತ್ರವತಿ ದೂರು ದಾಖಲಿಸಿದ್ದರು. ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮನಿ ಸಾಹು ಅವರ ನಿರ್ದೇಶನದ ತಂಡ ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಕಳುವಾಗಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಯಚರಣೆಯಲ್ಲಿ ಇನ್ಸ್ಪೆಕ್ಟರ್ ಬಸವರಾಜ್, ಸಬ್ ಇನ್ಸ್ಪೆಕ್ಟರ್ ಚಂದ್ರಹಾಸ್ ನಾಯಕ್, ಅಪರಾಧ ವಿಭಾಗದ ಪಿಎಸ್ಐ ಮಂಜುನಾಥ್, ಎಎಸ್ಐ ಎಂ.ಎಸ್.ಗಿರೀಶ್, ಸಿಬ್ಬಂದಿ ರಮೇಶ್, ಸುಂದ್ರಪ್ಪ, ಸುರೇಶ್ ಇತರರು ಹಾಜರಿದ್ದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…