ಚಾಮರಾಜನಗರ: ತಾಲ್ಲೂಕಿನ ಸಂತೆಮರಹಳ್ಳಿಯ ಮನೆಯೊಂದರಲ್ಲಿ ಹಾಡಹಗಲೇ ಕಳ್ಳತನ ಮಾಡಿದ್ದ ಆರೋಪಿಯನ್ನು ಕೃತ್ಯ ನಡೆದ ೨೪ ಗಂಟೆಯೊಳಗೆ ಸ್ಥಳೀಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಗರದ ಬಸವೇಶ್ವರ ಚಲನಚಿತ್ರ ಮಂದಿರದ ಹಿಂಭಾಗದ ಬಡಾವಣೆಯ ನಿವಾಸಿ ರಾಜೇಶ (೩೫) ಬಂಧಿತ ಆರೋಪಿ. ಸಂತೇಮರಹಳ್ಳಿ ಸಮುದಾಯ ಆರೋಗ್ಯ ಕೇಂದ್ರದ ಸ್ಟಾಫ್ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ನೇತ್ರಾವತಿ ಎಂಬುವರ ಮನೆಯಲ್ಲಿ ವಸತಿ ಗೃಹದ ಬೀಗ ಮುರಿದು ಒಡವೆ, ಟಿವಿ, ಸಿಲಿಂಡರ್ ಸೇರಿದಂತೆ ೩.೩೦ ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಬಂಧಿತ ಆರೋಪಿ ದೋಚಿದ್ದ.
ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ನೇತ್ರವತಿ ದೂರು ದಾಖಲಿಸಿದ್ದರು. ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮನಿ ಸಾಹು ಅವರ ನಿರ್ದೇಶನದ ತಂಡ ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಕಳುವಾಗಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಯಚರಣೆಯಲ್ಲಿ ಇನ್ಸ್ಪೆಕ್ಟರ್ ಬಸವರಾಜ್, ಸಬ್ ಇನ್ಸ್ಪೆಕ್ಟರ್ ಚಂದ್ರಹಾಸ್ ನಾಯಕ್, ಅಪರಾಧ ವಿಭಾಗದ ಪಿಎಸ್ಐ ಮಂಜುನಾಥ್, ಎಎಸ್ಐ ಎಂ.ಎಸ್.ಗಿರೀಶ್, ಸಿಬ್ಬಂದಿ ರಮೇಶ್, ಸುಂದ್ರಪ್ಪ, ಸುರೇಶ್ ಇತರರು ಹಾಜರಿದ್ದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…