ಚಾಮರಾಜನಗರ

ಮ.ಬೆಟ್ಟ | ಲಾಡು ಪ್ರಸಾದದಲ್ಲಿ ಮುಳ್ಳು ; ಕಾರ್ಯದರ್ಶಿ ಸ್ಪಷ್ಟನೆ

ಹನೂರು: ಪವಾಡ ಪುರುಷ ಶ್ರೀ ಕ್ಷೇತ್ರ ಮಲೆ ಮಹದೇಶ್ವರ (Malemahadeshwara hill) ಬೆಟ್ಟಕ್ಕೆ ಕೆಟ್ಟ ಹೆಸರು ತರಲು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಬೆಟ್ಟದ ಲಾಡಿನಲ್ಲಿ ಮುಳ್ಳು (Thorn) ಸಿಕ್ಕಿದೆ ಎಂದು ಆರೋಪ ಮಾಡುತ್ತಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ಸ್ಪಷ್ಟಪಡಿಸಿದ್ದಾರೆ.

ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎಇರಘು ಮಾಧ್ಯಮದವರೊಂದಿಗೆ ಮಾತನಾಡಿ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಲಾಡು ಪ್ರಸಾದ ಮುಳ್ಳಿದೆ (Thorn) ಎಂದು ಕಳೆದ ವಾರ ಭಕ್ತಾದಿಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ (Social media) ವಿಡಿಯೋ ಹರಿ ಬಿಟ್ಟಿದ್ದರು.

ಇದನ್ನೂ ಓದಿ:- ವಾಜಮಂಗಲ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ಗೆ ಅಪಮಾನ: ಬೀದಿಗಿಳಿದು ಪ್ರತಿಭಟನೆ ನಡೆಸಿದ ಮಹಿಳೆಯರು 

ಈ ಸಂಬಂಧ ಒಂದು ತಂಡ ರಚನೆ ಮಾಡಿ ಲಾಡು ತಯಾರಿಕ ಕೇಂದ್ರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ಮಾಡಲಾಗಿ ಲಾಡು ಪ್ರಸಾದದಲ್ಲಿ ಸಿಕ್ಕಿರುವ ಮುಳ್ಳು (Thorn) ನಮ್ಮ ಪ್ರಾಧಿಕಾರದ ವ್ಯಾಪ್ತಿಯಲ್ಲಿಯೇ ಇಲ್ಲ, ಆದ್ದರಿಂದ ಭಕ್ತಾದಿಗಳು ಸುಳ್ಳು ವಿಡಿಯೋಗಳನ್ನು ಶೇರ್ ಮಾಡಬಾರದು ಎಲ್ಲರಿಗೂ ಮಹದೇಶ್ವರ ಒಳ್ಳೆಯದು ಮಾಡಲಿ ಎಂದು ಮನವಿ ಮಾಡಿದ್ದಾರೆ.

ಇನ್ನು ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ತಯಾರು ಮಾಡುವ ಲಾಡಿಗೆ ನಂದಿನಿ ತುಪ್ಪ, ಗುಣಮಟ್ಟದ ಅಡುಗೆ ಎಣ್ಣೆ, ದ್ರಾಕ್ಷಿ ಗೋಡಂಬಿ, ಕಡ್ಲೆ ಹಿಟ್ಟು, ಸಕ್ಕರೆ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಬಳಸಲಾಗುತ್ತಿದೆ ಎಂದು ವಿಡಿಯೋ ಚಿತ್ರೀಕರಿಸಿ ಮಾಹಿತಿ ಹಂಚಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

7 mins ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

2 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

2 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

3 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

3 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

4 hours ago