Thorn malemahadeshwara hill prasadam
ಹನೂರು: ಪವಾಡ ಪುರುಷ ಶ್ರೀ ಕ್ಷೇತ್ರ ಮಲೆ ಮಹದೇಶ್ವರ (Malemahadeshwara hill) ಬೆಟ್ಟಕ್ಕೆ ಕೆಟ್ಟ ಹೆಸರು ತರಲು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಬೆಟ್ಟದ ಲಾಡಿನಲ್ಲಿ ಮುಳ್ಳು (Thorn) ಸಿಕ್ಕಿದೆ ಎಂದು ಆರೋಪ ಮಾಡುತ್ತಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ಸ್ಪಷ್ಟಪಡಿಸಿದ್ದಾರೆ.
ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎಇರಘು ಮಾಧ್ಯಮದವರೊಂದಿಗೆ ಮಾತನಾಡಿ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಲಾಡು ಪ್ರಸಾದ ಮುಳ್ಳಿದೆ (Thorn) ಎಂದು ಕಳೆದ ವಾರ ಭಕ್ತಾದಿಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ (Social media) ವಿಡಿಯೋ ಹರಿ ಬಿಟ್ಟಿದ್ದರು.
ಇದನ್ನೂ ಓದಿ:- ವಾಜಮಂಗಲ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ಗೆ ಅಪಮಾನ: ಬೀದಿಗಿಳಿದು ಪ್ರತಿಭಟನೆ ನಡೆಸಿದ ಮಹಿಳೆಯರು
ಈ ಸಂಬಂಧ ಒಂದು ತಂಡ ರಚನೆ ಮಾಡಿ ಲಾಡು ತಯಾರಿಕ ಕೇಂದ್ರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ಮಾಡಲಾಗಿ ಲಾಡು ಪ್ರಸಾದದಲ್ಲಿ ಸಿಕ್ಕಿರುವ ಮುಳ್ಳು (Thorn) ನಮ್ಮ ಪ್ರಾಧಿಕಾರದ ವ್ಯಾಪ್ತಿಯಲ್ಲಿಯೇ ಇಲ್ಲ, ಆದ್ದರಿಂದ ಭಕ್ತಾದಿಗಳು ಸುಳ್ಳು ವಿಡಿಯೋಗಳನ್ನು ಶೇರ್ ಮಾಡಬಾರದು ಎಲ್ಲರಿಗೂ ಮಹದೇಶ್ವರ ಒಳ್ಳೆಯದು ಮಾಡಲಿ ಎಂದು ಮನವಿ ಮಾಡಿದ್ದಾರೆ.
ಇನ್ನು ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ತಯಾರು ಮಾಡುವ ಲಾಡಿಗೆ ನಂದಿನಿ ತುಪ್ಪ, ಗುಣಮಟ್ಟದ ಅಡುಗೆ ಎಣ್ಣೆ, ದ್ರಾಕ್ಷಿ ಗೋಡಂಬಿ, ಕಡ್ಲೆ ಹಿಟ್ಟು, ಸಕ್ಕರೆ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಬಳಸಲಾಗುತ್ತಿದೆ ಎಂದು ವಿಡಿಯೋ ಚಿತ್ರೀಕರಿಸಿ ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…