ಚಾಮರಾಜನಗರ

ಮ.ಬೆಟ್ಟ | ಲಾಡು ಪ್ರಸಾದದಲ್ಲಿ ಮುಳ್ಳು ; ಕಾರ್ಯದರ್ಶಿ ಸ್ಪಷ್ಟನೆ

ಹನೂರು: ಪವಾಡ ಪುರುಷ ಶ್ರೀ ಕ್ಷೇತ್ರ ಮಲೆ ಮಹದೇಶ್ವರ (Malemahadeshwara hill) ಬೆಟ್ಟಕ್ಕೆ ಕೆಟ್ಟ ಹೆಸರು ತರಲು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಬೆಟ್ಟದ ಲಾಡಿನಲ್ಲಿ ಮುಳ್ಳು (Thorn) ಸಿಕ್ಕಿದೆ ಎಂದು ಆರೋಪ ಮಾಡುತ್ತಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ಸ್ಪಷ್ಟಪಡಿಸಿದ್ದಾರೆ.

ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎಇರಘು ಮಾಧ್ಯಮದವರೊಂದಿಗೆ ಮಾತನಾಡಿ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಲಾಡು ಪ್ರಸಾದ ಮುಳ್ಳಿದೆ (Thorn) ಎಂದು ಕಳೆದ ವಾರ ಭಕ್ತಾದಿಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ (Social media) ವಿಡಿಯೋ ಹರಿ ಬಿಟ್ಟಿದ್ದರು.

ಇದನ್ನೂ ಓದಿ:- ವಾಜಮಂಗಲ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ಗೆ ಅಪಮಾನ: ಬೀದಿಗಿಳಿದು ಪ್ರತಿಭಟನೆ ನಡೆಸಿದ ಮಹಿಳೆಯರು 

ಈ ಸಂಬಂಧ ಒಂದು ತಂಡ ರಚನೆ ಮಾಡಿ ಲಾಡು ತಯಾರಿಕ ಕೇಂದ್ರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ಮಾಡಲಾಗಿ ಲಾಡು ಪ್ರಸಾದದಲ್ಲಿ ಸಿಕ್ಕಿರುವ ಮುಳ್ಳು (Thorn) ನಮ್ಮ ಪ್ರಾಧಿಕಾರದ ವ್ಯಾಪ್ತಿಯಲ್ಲಿಯೇ ಇಲ್ಲ, ಆದ್ದರಿಂದ ಭಕ್ತಾದಿಗಳು ಸುಳ್ಳು ವಿಡಿಯೋಗಳನ್ನು ಶೇರ್ ಮಾಡಬಾರದು ಎಲ್ಲರಿಗೂ ಮಹದೇಶ್ವರ ಒಳ್ಳೆಯದು ಮಾಡಲಿ ಎಂದು ಮನವಿ ಮಾಡಿದ್ದಾರೆ.

ಇನ್ನು ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ತಯಾರು ಮಾಡುವ ಲಾಡಿಗೆ ನಂದಿನಿ ತುಪ್ಪ, ಗುಣಮಟ್ಟದ ಅಡುಗೆ ಎಣ್ಣೆ, ದ್ರಾಕ್ಷಿ ಗೋಡಂಬಿ, ಕಡ್ಲೆ ಹಿಟ್ಟು, ಸಕ್ಕರೆ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಬಳಸಲಾಗುತ್ತಿದೆ ಎಂದು ವಿಡಿಯೋ ಚಿತ್ರೀಕರಿಸಿ ಮಾಹಿತಿ ಹಂಚಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

9 mins ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

13 mins ago

ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ: ಕಬಿನಿ ಜಲಾಶಯದ ಒಳಹರಿವು ಹೆಚ್ಚಳ

ಎಚ್‌.ಡಿ.ಕೋಟೆ: ಕೇರಳ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ…

2 hours ago

ಇಂದಿನಿಂದ 6 ದಿನ ಪ್ರಧಾನಿ ಮೋದಿ ವಿದೇಶ ಪ್ರವಾಸ

ನವದೆಹಲಿ: ಇಂದಿನಿಂದ ಆರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ಪ್ರವಾಸ ಕೈಗೊಂಡಿದ್ದಾರೆ. ಈ…

2 hours ago

ಅಷ್ಟಾಂಗ ಯೋಗದ ರಾಜಧಾನಿ ಮೈಸೂರು

ಉದ್ಯಮವಾಗಿಯೂ ಬೆಳೆಯುವತ್ತ ಯೋಗ ಮಕ್ಕಳು ವಯೋವೃದ್ಧರನ್ನೂ ಸೆಳೆಯುವ ಯೋಗ ಯೋಗ ದೈಹಿಕ ಬಲ ಮತ್ತು ನಮ್ಯತೆ ಹೆಚ್ಚಿಸುವಲ್ಲಿ ಸಹಕಾರಿ ನಮಗೆ…

4 hours ago

ಆಂದೋಲನ ಸಾರ್ಥಕ ಪಯಣ : ಪರಿಸರ ಸಂರಕ್ಷಣೆ ಎಲ್ಲರ ಹೊಣೆ

ಎಚ್.ಎಸ್.ದಿನೇಶ್‌ ಕುಮಾರ್‌ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…

5 hours ago