Thorn malemahadeshwara hill prasadam
ಹನೂರು: ಪವಾಡ ಪುರುಷ ಶ್ರೀ ಕ್ಷೇತ್ರ ಮಲೆ ಮಹದೇಶ್ವರ (Malemahadeshwara hill) ಬೆಟ್ಟಕ್ಕೆ ಕೆಟ್ಟ ಹೆಸರು ತರಲು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಬೆಟ್ಟದ ಲಾಡಿನಲ್ಲಿ ಮುಳ್ಳು (Thorn) ಸಿಕ್ಕಿದೆ ಎಂದು ಆರೋಪ ಮಾಡುತ್ತಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ಸ್ಪಷ್ಟಪಡಿಸಿದ್ದಾರೆ.
ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎಇರಘು ಮಾಧ್ಯಮದವರೊಂದಿಗೆ ಮಾತನಾಡಿ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಲಾಡು ಪ್ರಸಾದ ಮುಳ್ಳಿದೆ (Thorn) ಎಂದು ಕಳೆದ ವಾರ ಭಕ್ತಾದಿಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ (Social media) ವಿಡಿಯೋ ಹರಿ ಬಿಟ್ಟಿದ್ದರು.
ಇದನ್ನೂ ಓದಿ:- ವಾಜಮಂಗಲ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ಗೆ ಅಪಮಾನ: ಬೀದಿಗಿಳಿದು ಪ್ರತಿಭಟನೆ ನಡೆಸಿದ ಮಹಿಳೆಯರು
ಈ ಸಂಬಂಧ ಒಂದು ತಂಡ ರಚನೆ ಮಾಡಿ ಲಾಡು ತಯಾರಿಕ ಕೇಂದ್ರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ಮಾಡಲಾಗಿ ಲಾಡು ಪ್ರಸಾದದಲ್ಲಿ ಸಿಕ್ಕಿರುವ ಮುಳ್ಳು (Thorn) ನಮ್ಮ ಪ್ರಾಧಿಕಾರದ ವ್ಯಾಪ್ತಿಯಲ್ಲಿಯೇ ಇಲ್ಲ, ಆದ್ದರಿಂದ ಭಕ್ತಾದಿಗಳು ಸುಳ್ಳು ವಿಡಿಯೋಗಳನ್ನು ಶೇರ್ ಮಾಡಬಾರದು ಎಲ್ಲರಿಗೂ ಮಹದೇಶ್ವರ ಒಳ್ಳೆಯದು ಮಾಡಲಿ ಎಂದು ಮನವಿ ಮಾಡಿದ್ದಾರೆ.
ಇನ್ನು ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ತಯಾರು ಮಾಡುವ ಲಾಡಿಗೆ ನಂದಿನಿ ತುಪ್ಪ, ಗುಣಮಟ್ಟದ ಅಡುಗೆ ಎಣ್ಣೆ, ದ್ರಾಕ್ಷಿ ಗೋಡಂಬಿ, ಕಡ್ಲೆ ಹಿಟ್ಟು, ಸಕ್ಕರೆ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಬಳಸಲಾಗುತ್ತಿದೆ ಎಂದು ವಿಡಿಯೋ ಚಿತ್ರೀಕರಿಸಿ ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…