ಚಾಮರಾಜನಗರ

ಮಹದೇಶ್ವರ ಬೆಟ್ಟದಲ್ಲಿ ಮೂರು ಬೈಕ್‌ ಬೆಂಕಿಗಾಹುತಿ

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಮುಂಜಾನೆ 3 ದ್ವಿಚಕ್ರ ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.

ರಾಜ್ಯದ ವಿವಿಧ ಭಾಗಗಳಿಂದ ಮಹದೇಶ್ವರ ಬೆಟ್ಟಕ್ಕೆ ಬಂದ ಭಕ್ತರು, ಸಂಕಮ್ಮ ನಿಲಯದ ಬಳಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ ರಾತ್ರಿ ವಾಸ್ತವ್ಯ ಹೂಡುತ್ತಾರೆ. ಅದರಂತೆ ಸೋಮವಾರವೂ ಭಕ್ತಾದಿಗಳು ವಾಸ್ತವ್ಯ ಹೂಡಿದ್ದರು. ಮಧ್ಯರಾತ್ರಿ 1 ಗಂಟೆಯ ವೇಳೆಗೆ 3 ದ್ವಿಚಕ್ರ ವಾಹನಗಳಿಗೆ ಇದ್ದಕ್ಕಿದ್ದಂತೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ದ್ವಿಚಕ್ರ ವಾಹನಕ್ಕೆ ಬೆಂಕಿ ಹೊತ್ತಿ ಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿ, ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ 3 ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದವು.

ಈ ಘಟನೆಯು ಉದ್ದೇಶಪೂರ್ವಕವಾಗಿ ನಡೆದಿದೆಯೋ ಅಥವಾ ಆಕಸ್ಮಿಕವಾಗಿ ಸಂಭವಿಸಿದೆಯೋ ಎಂಬ ಬಗ್ಗೆ ಸಾರ್ವಜನಿಕರಲ್ಲಿ ಸಂಶಯ ಉಂಟಾಗಿದೆ. ಪೊಲೀಸರ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.

ಇದನ್ನ ಓದಿದ್ರಾ..?:- ಇರಾನ್-ಇಸ್ರೇಲ್‌ ಸಂಘರ್ಷ: ಜಾಗತಿಕ ಮಾರುಕಟ್ಟೆಯಲ್ಲಿ ಭಾರೀ ತಲ್ಲಣ

ಸೋಮವಾರ ರಾತ್ರಿ 1 ಗಂಟೆಯಲ್ಲಿ 3 ಬೈಕ್‌ಗಳಿಗೆ ಬೆಂಕಿ ಹೊತ್ತಿಕೊಂಡ ಮಾಹಿತಿ ತಿಳಿದ ತಕ್ಷಣ ನಮ್ಮ ಸಿಬ್ಬಂದಿ ತೆರಳಿ ಬೆಂಕಿಯನ್ನು ನಂದಿಸಿದ್ದಾರೆ. ಕರ್ನಾಟಕದ ಎರಡು ತಮಿಳುನಾಡು ಮೂಲದ ಒಂದು ಬೈಕ್ ಸುಟ್ಟುಹೋಗಿದೆ. ಮೇಲ್ನೋಟಕ್ಕೆ ಬೆಂಕಿ ಆಕಸ್ಮಿಕವಾಗಿ ಬಿದ್ದಿದೆ ಎನ್ನಲಾಗುತ್ತಿದೆ. ವಿವಿಧ ಆಯಾಮಗಳಲ್ಲಿ ತನಿಖೆ ಮಾಡಲಾಗುವುದು ಎಂದು ಮ.ಬೆಟ್ಟ ಠಾಣೆ ಇನ್‌ಸ್ಪೆಕ್ಟರ್ ಜಗದೀಶ್ ತಿಳಿಸಿದ್ದಾರೆ.

ಆದೋಲನದ ಪತ್ರಿಕೆ ಮನೆ ತಲುಪಿಲ್ವಾ ಹಾಗಾದ್ರೆ.. ಡಿಜಿಟಲ್‌ ಪೇಪರ್‌ ಓದಿ

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

9 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

10 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

20 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

21 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

21 hours ago