ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ ಘಟನೆ ತಾಲ್ಲೂಕಿನ ದೇಪಾಪುರದಲ್ಲಿ ನಡೆದಿದೆ.

ತಾಲ್ಲೂಕಿನ ದೇಪಾಪುರ ಗ್ರಾಮದ ಗುರುಮಲ್ಲಪ್ಪ ಹಸು ಕಳೆದುಕೊಂಡಿರುವ ರೈತ. ವೀರಭದ್ರಪ್ಪ ಎಂಬವರ ಜಮೀನಿನಲ್ಲಿ ಹಸು ಮೇಯಿಸುವಾಗ ಹುಲಿ ದಾಳಿ ನಡೆಸಿದ್ದು, ಕುತ್ತಿಗೆಗೆ ಬಾಯಿ ಹಾಕಿ ರಕ್ತ ಹೀರಿ ಕೊಂದಿದೆ.
ಕೂಡಲೇ ಹುಲಿಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ:-ಮೈಸೂರು | ಜಿಲ್ಲೆಯಲ್ಲಿ ಅಪೌಷ್ಠಿಕ‌ ಮಕ್ಕಳ ಸಂಖ್ಯೆ ಗಣನೀಯ ಇಳಿಕೆ

ಪರಿಹಾರ ಬೇಡ ಹಸು ತೆಗೆದುಕೊಡಿ:
ಹುಲಿ ದಾಳಿ ವಿಚಾರ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ ವೇಳೆ ರೈತರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಹುಲಿ ದಾಳಿಗೆ ಮೃತಪಟ್ಟ ಹಸು ನಿತ್ಯ ೧೦ ಲೀ. ಹಾಲು ಕೊಡುತ್ತಿತ್ತು. ಹೈನುಗಾರಿಕೆಯಿಂದ ಜೀವನ ಸಾಗಿಸುತ್ತಿದ್ದೆವು. ಈಗ, ಹಸು ಕಳೆದುಕೊಂಡು ನಷ್ಟ ಉಂಟಾಗಿದ್ದು ತಮಗೆ ಪರಿಹಾರ ಬೇಡ, ಹಸುವನ್ನು ಖರೀದಿಸಿ ಕೊಡಿ. ನೀವು ಪ್ರಾಣಿಗಳನ್ನು ರಕ್ಷಣೆ ಮಾಡಿದಂತೆ ರೈತರನ್ನೂ ರಕ್ಷಿಸಿ ಎಂದು ರೈತರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

40 seconds ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

15 mins ago

ಹೊಸ ಸುಂಕ ಸಾರಿದ ಅಮೆರಿಕ, ಈ ಬಾರಿ ಯಾವುದರ ಮೇಲೆ ಟ್ರಂಪ್‌ ಕಣ್ಣು?

ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…

21 mins ago

HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಲ್ಲ

ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ…

47 mins ago

ಕೊಡಗು | ಟ್ರೆಕ್ಕಿಂಗ್ ಹೊರಟಿದ್ದ 36 ವರ್ಷದ ಮಹಿಳೆ ನಾಪತ್ತೆ

ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ…

3 hours ago

ಮಹದೇಶ್ವರ ಬೆಟ್ಟ | ರಸ್ತೆಬದಿಯಲ್ಲೇ ಮತ್ತೆ ಚಿರತೆ ಪ್ರತ್ಯಕ್ಷ ; ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡಿದೆ. ವಾಹನ ಮುಂದೆ…

3 hours ago