ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ಜೋನ್ ವಲಯ ವ್ಯಾಪ್ತಿಯಲ್ಲಿ ವ್ಯಾಘ್ರನ ದಾಳಿ ಮುಂದುವರಿದಿದ್ದು, ರೈತರು ಕಂಗಾಲಾಗಿದ್ದಾರೆ.
ನಿನ್ನೆ ತಾನೇ ವಡೆಯನಪುರ ಗ್ರಾಮದಲ್ಲಿ ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು, ಒಂದು ಹಸುವಿನ ಸ್ಥಿತಿ ಚಿಂತಾಜನಕವಾಗಿದೆ.
ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಹುಲಿ ದಾಳಿ ಹೆಚ್ಚಾಗಿದ್ದು, ಇದನ್ನು ತಡೆಯಲು ಅರಣ್ಯ ಇಲಾಖೆ ಸಿಬ್ಬಂದಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಅನ್ನದಾತರು ಆಕ್ರೋಶ ಹೊರಹಾಕಿದ್ದಾರೆ.
ಹಸುಗಳನ್ನು ಕಳೆದುಕೊಂಡು ರೈತರಿಗೆ ಅಪಾರ ನಷ್ಟವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಶೀಘ್ರದಲ್ಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಹುಲಿ ದಾಳಿ ಮುಂದುವರಿದಿದ್ದು, ಜಮೀನುಗಳಿಗೆ ತೆರಳಲು ಜನರು ಹಿಂದೇಟು ಹಾಕುತ್ತಿದ್ದಾರೆ.
ಈ ಭಾಗದಲ್ಲಿ ಹುಲಿ ದಾಳಿಯನ್ನು ತಡೆಯಲು ಸೂಕ್ತ ವ್ಯವಸ್ಥೆ ಕಲ್ಪಿಸಿ, ಕಾಡಿನಿಂದ ನಾಡಿಗೆ ಹುಲಿಗಳು ಬರದ ಹಾಗೆ ನೋಡಿಕೊಳ್ಳಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…