ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ಜೋನ್ ವಲಯ ವ್ಯಾಪ್ತಿಯಲ್ಲಿ ವ್ಯಾಘ್ರನ ದಾಳಿ ಮುಂದುವರಿದಿದ್ದು, ರೈತರು ಕಂಗಾಲಾಗಿದ್ದಾರೆ.
ನಿನ್ನೆ ತಾನೇ ವಡೆಯನಪುರ ಗ್ರಾಮದಲ್ಲಿ ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು, ಒಂದು ಹಸುವಿನ ಸ್ಥಿತಿ ಚಿಂತಾಜನಕವಾಗಿದೆ.
ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಹುಲಿ ದಾಳಿ ಹೆಚ್ಚಾಗಿದ್ದು, ಇದನ್ನು ತಡೆಯಲು ಅರಣ್ಯ ಇಲಾಖೆ ಸಿಬ್ಬಂದಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಅನ್ನದಾತರು ಆಕ್ರೋಶ ಹೊರಹಾಕಿದ್ದಾರೆ.
ಹಸುಗಳನ್ನು ಕಳೆದುಕೊಂಡು ರೈತರಿಗೆ ಅಪಾರ ನಷ್ಟವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಶೀಘ್ರದಲ್ಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಹುಲಿ ದಾಳಿ ಮುಂದುವರಿದಿದ್ದು, ಜಮೀನುಗಳಿಗೆ ತೆರಳಲು ಜನರು ಹಿಂದೇಟು ಹಾಕುತ್ತಿದ್ದಾರೆ.
ಈ ಭಾಗದಲ್ಲಿ ಹುಲಿ ದಾಳಿಯನ್ನು ತಡೆಯಲು ಸೂಕ್ತ ವ್ಯವಸ್ಥೆ ಕಲ್ಪಿಸಿ, ಕಾಡಿನಿಂದ ನಾಡಿಗೆ ಹುಲಿಗಳು ಬರದ ಹಾಗೆ ನೋಡಿಕೊಳ್ಳಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…