ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ಜೋನ್ ವಲಯ ವ್ಯಾಪ್ತಿಯಲ್ಲಿ ವ್ಯಾಘ್ರನ ದಾಳಿ ಮುಂದುವರಿದಿದ್ದು, ರೈತರು ಕಂಗಾಲಾಗಿದ್ದಾರೆ.
ನಿನ್ನೆ ತಾನೇ ವಡೆಯನಪುರ ಗ್ರಾಮದಲ್ಲಿ ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು, ಒಂದು ಹಸುವಿನ ಸ್ಥಿತಿ ಚಿಂತಾಜನಕವಾಗಿದೆ.
ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಹುಲಿ ದಾಳಿ ಹೆಚ್ಚಾಗಿದ್ದು, ಇದನ್ನು ತಡೆಯಲು ಅರಣ್ಯ ಇಲಾಖೆ ಸಿಬ್ಬಂದಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಅನ್ನದಾತರು ಆಕ್ರೋಶ ಹೊರಹಾಕಿದ್ದಾರೆ.
ಹಸುಗಳನ್ನು ಕಳೆದುಕೊಂಡು ರೈತರಿಗೆ ಅಪಾರ ನಷ್ಟವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಶೀಘ್ರದಲ್ಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಹುಲಿ ದಾಳಿ ಮುಂದುವರಿದಿದ್ದು, ಜಮೀನುಗಳಿಗೆ ತೆರಳಲು ಜನರು ಹಿಂದೇಟು ಹಾಕುತ್ತಿದ್ದಾರೆ.
ಈ ಭಾಗದಲ್ಲಿ ಹುಲಿ ದಾಳಿಯನ್ನು ತಡೆಯಲು ಸೂಕ್ತ ವ್ಯವಸ್ಥೆ ಕಲ್ಪಿಸಿ, ಕಾಡಿನಿಂದ ನಾಡಿಗೆ ಹುಲಿಗಳು ಬರದ ಹಾಗೆ ನೋಡಿಕೊಳ್ಳಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…