ಚಾಮರಾಜನಗರ

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ

ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ

ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ ಹುಲಿ ದಾಳಿಗೆ 2 ಕುರಿಗಳು ಮತ್ತು 2 ಮೇಕೆಗಳು ಮೃತಪಟ್ಟಿವೆ.

ಗ್ರಾಮದ ಶಿವಣ್ಣ ಶೆಟ್ಟಿ ಎಂಬುವರಿಗೆ ಸೇರಿದ 2 ಕುರಿಗಳು, 2 ಮೇಕೆಗಳು ಹುಲಿ ದಾಳಿಗೆ ಬಲಿಯಾಗಿವೆ. ಎಂದಿನಂತೆ ಶಿವಣ್ಣ ಶೆಟ್ಟಿ ಮತ್ತು ಅವರ ಮಗ ಶೇಷಣ್ಣ ಭಾನುವಾರ ಬೆಳಿಗ್ಗೆ ತಮ್ಮ 55 ಕುರಿ ಹಾಗೂ ಮೇಕೆಗಳನ್ನು ತಮ್ಮದೆ ಜಮೀನಿಗೆ ಮೇಯಿಸಲು ಕರೆತಂದಿದ್ದರು.

ಭಾನುವಾರ ಮಧ್ಯಾಹ್ನ 2.30 ಗಂಟೆ ಸಮಯದಲ್ಲಿ ಸಮೀಪವೇ ಇರುವ ಕರಿಕಲ್ಲು ಕ್ವಾರಿಯಿಂದ ಹುಲಿಯೊಂದು ದಾಳಿಯಿಟ್ಟು 2 ಮೇಕೆ ಹಾಗೂ 2 ಕುರಿಗಳ ಮೇಲೆ ಎರಗಿ ಅವುಗಳ ಕುತ್ತಿಗೆಗಳನ್ನು ಕಚ್ಚಿ ರಕ್ತ ಹೀರಿ ಸಾಯಿಸಿದೆ.

ಹುಲಿಯನ್ನು ಕಂಡ ಶೇಷಣ್ಣ ಕೂಗಾಡಿದ್ದಾರೆ. ಕೂಡಲೇ ಹುಲಿ ಮೇಕೆಗಳನ್ನು ಬಿಟ್ಟು ಕಲ್ಲು ಕ್ವಾರಿಯತ್ತ ಪರಾರಿಯಾಗಿದೆ. ಹುಲಿ ದಾಳಿಯಿಂದ 4 ಮೇಕೆಗಳು ಮೃತಪಟ್ಟಿದ್ದು 60 ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ.

ಇತ್ತೀಚೆಗೆ ಶಿವಣ್ಣ ಶೆಟ್ಟಿ ಅವರಿಗೆ ಸೇರಿದ ಮೇಕೆಯೊಂದರ ಮೇಲೆ ಚಿರತೆ ದಾಳಿ ನಡೆಸಿ ಸಾಯಿಸಿತ್ತು. ಒಂದು ವಾರದ ಹಿಂದೆ ಬಡಗಲಪುರ ಸಮೀಪದ ಗುಡ್ಡದ ಬಳಿ ಹುಲಿ ಮೇಯುತ್ತಿದ್ದ 2 ಮೇಕೆಗಳ ಮೇಲೆ ದಾಳಿ ನಡೆಸಿ ಕೊಂದು ಹಾಕಿತ್ತು. vಈ ಹಿನ್ನೆಲೆಯಲ್ಲಿ ಹುಲಿ ದಾಳಿ ನಡೆದಿರುವ 150 ಮೀಟರ್ ಅಂತರದಲ್ಲಿ ಅರಣ್ಯ ಇಲಾಖೆಯಿಂದ ಹಿಂದೆಯೇ ಬೋನ್ ಇಡಲಾಗಿದೆ. ಆದರೆ, ಚಿರತೆ, ಹುಲಿಯಾಗಲಿ ಸೆರೆಯಾಗಿಲ್ಲ. ಇದರಿಂದ ಸಿದ್ದಲಿಂಗಪುರ ಹಾಗೂ ಸುತ್ತಲಿನ ಗ್ರಾಮಗಳ ಜನರು ಆತಂಕಗೊಂಡಿದ್ದಾರೆ. ಹುಲಿ ದಾಳಿ ವಿಷಯ ತಿಳಿದ ಚಾಮರಾಜನಗರ ಪ್ರಾದೇಶಿಕ ವಲಯಾರಣ್ಯದ ಅರಣ್ಯ ರಕ್ಷಕರಾದ ಕೃಷ್ಣಮೂರ್ತಿ, ಶೇಷಾದ್ರಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.

ಈ ಭಾಗದಲ್ಲಿ ಎಣ್ಣೆ ಹೊಳೆ ಮಹದೇಶ್ವರ ಬೆಟ್ಟ ಗುಡ್ಡಗಳಿದ್ದು, ಚಾಮರಾಜನಗರ ಪ್ರಾದೇಶಿಕ ವಲಯಾರಣ್ಯಕ್ಕೆ ಸೇರಿದೆ. ಇದಲ್ಲದೆ ಅಮಚವಾಡಿ, ಬಡಗಲಪುರ, ಸಿದ್ದಲಿಂಗಪುರ ಸುತ್ತಮುತ್ತ ಕರಿಕಲ್ಲು ಕ್ವಾರಿಗಳಿದ್ದು, ಹುಲಿ ಮತ್ತು ಚಿರತೆಗಳು ವಾಸವಾಗಿದ್ದು ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಹುಲಿ, ಚಿರತೆ ಹಾವಳಿಯಿಂದ ಖುಷ್ಕಿ ಹಾಗೂ ಪಂಪ್‌ಸೆಟ್ ಜಮೀನುಗಳಿಗೆ ಹೋಗಿ ಬರಲು ಭಯವಾಗುತ್ತಿದೆ. ದನಗಾಹಿಗಳು ಜಾನುವಾರುಗಳನ್ನು ಮೇಯಿಸಲು ಆತಂಕಗೊಂಡಿದ್ದಾರೆ. ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸಿ ಹುಲಿ, ಚಿರತೆಗಳನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

15 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

15 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

15 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

15 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

15 hours ago