ಗುಂಡ್ಲುಪೇಟೆ : ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದ ನಾಗಪ್ಪ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ನಡೆದಿದೆ.
ಮತ್ತೊಂದು ಕಡೆ ಗ್ರಾಮದ ದೇಶಿಪುರ ಕಾಲೋನಿಯಲ್ಲಿ ಚಿನ್ನಮ್ಮ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿದೆ. ಭಾನುವಾರವಷ್ಟೆ ಇಂಗಲವಾಡಿ ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿತ್ತು. ಸೋಮವಾರ ಬೆಳಿಗ್ಗೆ ಪ್ರತ್ಯೇಕ ಎರಡು ಕಡೆಗಳಲ್ಲಿ ಹುಲಿ ದಾಳಿಗೆ ೨ ಹಸುಗಳು ಸಾವಿಗೀಡಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇದನ್ನು ಓದಿ: ಹುಲಿ ದಾಳಿಗೆ ಹಸು ಬಲಿ ; ರೈತರ ಪ್ರತಿಭಟನೆ
ಈಗಾಗಲೇ ಅಗತಗೌಡನಹಳ್ಳಿ ಬಳಿ ಹಸು ಕೊಂದಿದ್ದ ಸುತ್ತಮುತ್ತ ಸಾಕಾನೆಯ ಮೂಲಕ ಕೂಂಬಿಂಗ್ ಆರಂಭಿಸಿದ್ದು, ಸಾಕಾನೆ ನೋಡಲು ಜನ ಜಮಾಯಿಸಿದ್ದರಿಂದ ಕಿರಿಕಿರಿಯಾಯಿತು. ಜೊತೆಗೆ ಆನೆಯ ಹಿಂದೆ ಜನ ಹೋದರೆ ಹುಲಿ ಜನರ ಮೇಲೆ ಬೀಳುವ ಸಾಧ್ಯತೆ ಇರುವುದರಿಂದ ಗ್ರಾಮಸ್ಥರು ಸಹಕರಿಸಬೇಕೆಂದು ಅಽಕಾರಿಗಳು ಮನವಿ ಮಾಡಿದರು.
ಹಸು ಕಳೆದುಕೊಂಡ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…