ಗುಂಡ್ಲುಪೇಟೆ : ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದ ನಾಗಪ್ಪ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ನಡೆದಿದೆ.
ಮತ್ತೊಂದು ಕಡೆ ಗ್ರಾಮದ ದೇಶಿಪುರ ಕಾಲೋನಿಯಲ್ಲಿ ಚಿನ್ನಮ್ಮ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿದೆ. ಭಾನುವಾರವಷ್ಟೆ ಇಂಗಲವಾಡಿ ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿತ್ತು. ಸೋಮವಾರ ಬೆಳಿಗ್ಗೆ ಪ್ರತ್ಯೇಕ ಎರಡು ಕಡೆಗಳಲ್ಲಿ ಹುಲಿ ದಾಳಿಗೆ ೨ ಹಸುಗಳು ಸಾವಿಗೀಡಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇದನ್ನು ಓದಿ: ಹುಲಿ ದಾಳಿಗೆ ಹಸು ಬಲಿ ; ರೈತರ ಪ್ರತಿಭಟನೆ
ಈಗಾಗಲೇ ಅಗತಗೌಡನಹಳ್ಳಿ ಬಳಿ ಹಸು ಕೊಂದಿದ್ದ ಸುತ್ತಮುತ್ತ ಸಾಕಾನೆಯ ಮೂಲಕ ಕೂಂಬಿಂಗ್ ಆರಂಭಿಸಿದ್ದು, ಸಾಕಾನೆ ನೋಡಲು ಜನ ಜಮಾಯಿಸಿದ್ದರಿಂದ ಕಿರಿಕಿರಿಯಾಯಿತು. ಜೊತೆಗೆ ಆನೆಯ ಹಿಂದೆ ಜನ ಹೋದರೆ ಹುಲಿ ಜನರ ಮೇಲೆ ಬೀಳುವ ಸಾಧ್ಯತೆ ಇರುವುದರಿಂದ ಗ್ರಾಮಸ್ಥರು ಸಹಕರಿಸಬೇಕೆಂದು ಅಽಕಾರಿಗಳು ಮನವಿ ಮಾಡಿದರು.
ಹಸು ಕಳೆದುಕೊಂಡ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…