ಗುಂಡ್ಲುಪೇಟೆ : ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದ ನಾಗಪ್ಪ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ನಡೆದಿದೆ.
ಮತ್ತೊಂದು ಕಡೆ ಗ್ರಾಮದ ದೇಶಿಪುರ ಕಾಲೋನಿಯಲ್ಲಿ ಚಿನ್ನಮ್ಮ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿದೆ. ಭಾನುವಾರವಷ್ಟೆ ಇಂಗಲವಾಡಿ ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿತ್ತು. ಸೋಮವಾರ ಬೆಳಿಗ್ಗೆ ಪ್ರತ್ಯೇಕ ಎರಡು ಕಡೆಗಳಲ್ಲಿ ಹುಲಿ ದಾಳಿಗೆ ೨ ಹಸುಗಳು ಸಾವಿಗೀಡಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇದನ್ನು ಓದಿ: ಹುಲಿ ದಾಳಿಗೆ ಹಸು ಬಲಿ ; ರೈತರ ಪ್ರತಿಭಟನೆ
ಈಗಾಗಲೇ ಅಗತಗೌಡನಹಳ್ಳಿ ಬಳಿ ಹಸು ಕೊಂದಿದ್ದ ಸುತ್ತಮುತ್ತ ಸಾಕಾನೆಯ ಮೂಲಕ ಕೂಂಬಿಂಗ್ ಆರಂಭಿಸಿದ್ದು, ಸಾಕಾನೆ ನೋಡಲು ಜನ ಜಮಾಯಿಸಿದ್ದರಿಂದ ಕಿರಿಕಿರಿಯಾಯಿತು. ಜೊತೆಗೆ ಆನೆಯ ಹಿಂದೆ ಜನ ಹೋದರೆ ಹುಲಿ ಜನರ ಮೇಲೆ ಬೀಳುವ ಸಾಧ್ಯತೆ ಇರುವುದರಿಂದ ಗ್ರಾಮಸ್ಥರು ಸಹಕರಿಸಬೇಕೆಂದು ಅಽಕಾರಿಗಳು ಮನವಿ ಮಾಡಿದರು.
ಹಸು ಕಳೆದುಕೊಂಡ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…