ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಓಂಕಾರ್ ವಲಯದ ದೇಶಿಪುರ ಕಾಲೋನಿ ಯ ಜೇನು ಕುರುಬ ಜನಾಂಗದ ಪುಟ್ಟಮ್ಮ( 40) ಬಿನ್ ಲೇ.ಮಾರ ಎಂಬ ವಿಧವೆ ಮಹಿಳೆ ತನ್ನ ಕಾಚಿನ ಸಮೀಪದ ತನ್ನ ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುವ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿ ಪುಟ್ಟಮ್ಮ ಎಂಬ ಮಹಿಳೆಯನ್ನು ಕೊಂದುಹಾಕಿರುವ ಘಟನೆ ನಡೆದಿದೆ.
ಪುಟ್ಟಮ್ಮ ಗಂಡ ತೀರಿಕೊಂಡಿದ್ದು ತನ್ನ ಇಬ್ಬರು ಮಕ್ಕಳ ಜೊತೆ ವಾಸವಾಗಿದ್ದು ಪ್ರತಿನಿತ್ಯದಂತೆ ಹಸು ಕುರಿ ಮೇಯಿಸಲು ತೆರಳಿದ್ದಾಳೆ ಈ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿದ್ದು ಪುಟ್ಟಮ್ಮನ ಎದೆ ಕತ್ತು ಗಾಯಗೊಳಿಸಿ ಕೊಂದುಹಾಕಿದೆ.
ಅಕ್ಕಪಕ್ಕದ ಜನರು ಕೂಗಿಕೊಂಡಿದ್ದರಿಂದ ಹುಲಿ ಮೃತ ಪುಟ್ಟಮ್ಮನನ್ನು ಬಿಟ್ಟು ಓಡಿಹೋಗಿದೆ ಎನ್ನಲಾಗಿದ್ದು ಈ ಮೊದಲೇ ತಂದೆ ತೀರಿಕೊಂಡಿದ್ದು ಈಗ ತಾಯಿಯೂ ಮೃತಪಟ್ಟ ಹಿನ್ನಲು ಪುಟ್ಟಮ್ಮನ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ, ಹಿರಿಯ ಮಗ ಪಿಯು ಓದಿದ್ದು ಕಾಲೇಜು ಬಿಟ್ಟಿದ್ದಾನೆ, ಕಿರಿಯ ಮಗ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತಿದ್ದಾನೆ ಮಗನಿಗೆ ಕೆಲಸ ಮತ್ತು ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಗುಂಡ್ಲುಪೇಟೆ ಉಪ ವಿಭಾಗದ ಎಸಿಎಫ್ ಸುರೇಶ್ ಕುಮಾರ್, ಓಂಕಾರ್ ವಲತದ ಆರ್ ಎಫ್ ಓ ಸತೀಶ್ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿದರು, ಮೃತ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 20 ಲಕ್ಷ ಪರಿಹಾರ ನೀಡುವುದಾಗಿ ಓಂಕಾರ್ ವಲಯಾಧಿಕಾರಿ ಸತೀಶ್ ತಿಳಿಸಿದರು.
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…