ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಓಂಕಾರ್ ವಲಯದ ದೇಶಿಪುರ ಕಾಲೋನಿ ಯ ಜೇನು ಕುರುಬ ಜನಾಂಗದ ಪುಟ್ಟಮ್ಮ( 40) ಬಿನ್ ಲೇ.ಮಾರ ಎಂಬ ವಿಧವೆ ಮಹಿಳೆ ತನ್ನ ಕಾಚಿನ ಸಮೀಪದ ತನ್ನ ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುವ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿ ಪುಟ್ಟಮ್ಮ ಎಂಬ ಮಹಿಳೆಯನ್ನು ಕೊಂದುಹಾಕಿರುವ ಘಟನೆ ನಡೆದಿದೆ.
ಪುಟ್ಟಮ್ಮ ಗಂಡ ತೀರಿಕೊಂಡಿದ್ದು ತನ್ನ ಇಬ್ಬರು ಮಕ್ಕಳ ಜೊತೆ ವಾಸವಾಗಿದ್ದು ಪ್ರತಿನಿತ್ಯದಂತೆ ಹಸು ಕುರಿ ಮೇಯಿಸಲು ತೆರಳಿದ್ದಾಳೆ ಈ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿದ್ದು ಪುಟ್ಟಮ್ಮನ ಎದೆ ಕತ್ತು ಗಾಯಗೊಳಿಸಿ ಕೊಂದುಹಾಕಿದೆ.
ಅಕ್ಕಪಕ್ಕದ ಜನರು ಕೂಗಿಕೊಂಡಿದ್ದರಿಂದ ಹುಲಿ ಮೃತ ಪುಟ್ಟಮ್ಮನನ್ನು ಬಿಟ್ಟು ಓಡಿಹೋಗಿದೆ ಎನ್ನಲಾಗಿದ್ದು ಈ ಮೊದಲೇ ತಂದೆ ತೀರಿಕೊಂಡಿದ್ದು ಈಗ ತಾಯಿಯೂ ಮೃತಪಟ್ಟ ಹಿನ್ನಲು ಪುಟ್ಟಮ್ಮನ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ, ಹಿರಿಯ ಮಗ ಪಿಯು ಓದಿದ್ದು ಕಾಲೇಜು ಬಿಟ್ಟಿದ್ದಾನೆ, ಕಿರಿಯ ಮಗ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತಿದ್ದಾನೆ ಮಗನಿಗೆ ಕೆಲಸ ಮತ್ತು ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಗುಂಡ್ಲುಪೇಟೆ ಉಪ ವಿಭಾಗದ ಎಸಿಎಫ್ ಸುರೇಶ್ ಕುಮಾರ್, ಓಂಕಾರ್ ವಲತದ ಆರ್ ಎಫ್ ಓ ಸತೀಶ್ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿದರು, ಮೃತ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 20 ಲಕ್ಷ ಪರಿಹಾರ ನೀಡುವುದಾಗಿ ಓಂಕಾರ್ ವಲಯಾಧಿಕಾರಿ ಸತೀಶ್ ತಿಳಿಸಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…