ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೇರಂಬಾಡಿ ಗ್ರಾಮದ ಸಚಿನ್ ಎಂಬುವವರ ಜಮೀನಿನಲ್ಲಿ ಮುಸುಕಿನ ಜೋಳ ಕಟಾವಿಗೆ ತೆರಳಿದಾಗ ಹುಲಿ ಕಾಣಿಸಿಕೊಂಡಿತ್ತು. ನಂತರ ಗಾಬರಿಗೊಂಡ ಜನರು ರೈತಸಂಘದ ಸ್ನೇಹಿತರಿಗೆ ಮಾಹಿತಿ ನೀಡಿದ್ದರು.
ಹುಲಿಯನ್ನು ಸೆರೆ ಹಿಡಿಯಲೇಬೇಕು ಎಂದು ಆಗ್ರಹಿಸಿದ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿದಿದ್ದಾರೆ.
ಕಾರ್ಯಾಚರಣೆ ವೇಳೆ ಹುಲಿಯು ಅರಣ್ಯ ಇಲಾಖೆ ವಾಚರ್ ಮೇಲೆ ಎರಗಿದ್ದು, ಕೈ ಕಾಲು ಕಚ್ಚಿ ಗಾಯಗೊಳಿಸಿದೆ.
ಸೆರೆಯಾದ ಹುಲಿ ಸುಮಾರು ಒಂದೂವರೆ ಎರಡು ವರ್ಷದ ಗಂಡು ಹುಲಿ ಎಂದು ತಿಳಿದುಬಂದಿದ್ದು, ಹುಲಿ ಗಾಯಗೊಂಡ ಕಾರಣ ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ಬಿಡಲಾಗಿದೆ ಎಂದು ಎಸಿಎಫ್ ನವೀನ್ ಕುಮಾರ್ ತಿಳಿಸಿದ್ದಾರೆ.
ಸ್ಥಳಕ್ಕೆ ಎಸಿಎಫ್ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ರೈತರು ಈ ಭಾಗದಲ್ಲಿ ಕಾಡು ಪ್ರಾಣಿಗಳು ಬೆಳೆನಾಶ ಮಾಡುತ್ತಿದ್ದು, ಪರಿಹಾರ ಮಾತ್ರ ಇನ್ನೂ ಬಂದಿಲ್ಲ ಎಂದು ಅಳಲು ತೋಡಿಕೊಂಡರು. ಇದಕ್ಕೆ ಉತ್ತರಿಸಿದ ಎಸಿಎಫ್ ಅವರು, ಬೆಳೆ ನಷ್ಟಕ್ಕೆ ಸರ್ಕಾರದ ಹಣ ಬಂದಾಗ ನೀಡುವ ಭರವಸೆ ನೀಡಿದರು.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…