Mysore
30
scattered clouds

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಕೊಳ್ಳೇಗಾಲ ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್ (35) ಬಂಧಿತ ವ್ಯಕ್ತಿ. ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಯಳಂದೂರು ವನ್ಯಜೀವಿ ಉಪ ವಿಭಾಗದ ಕೊಳ್ಳೇಗಾಲ ವನ್ಯಜೀವಿ ವಲಯದ ವ್ಯಾಪ್ತಿಯ ಗುಂಡಾಲ್ ಜಲಾಶಯದ 1ನೇ ತೂಬಿನ ಹತ್ತಿರ ಗಂಡು ಹುಲಿ ಕಳೇಬರ ಪತ್ತೆಯಾಗಿತ್ತು.

ಈ ಸಂಬಂಧ ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡು ಕುಮಾರ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹುಲಿ ಸಾವು ಪ್ರಕರಣದ ತನಿಖೆಯನ್ನು ಮುಂದುವರಿಸಲಾಗಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!