Mysore
21
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.

ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಗುಂಡಾಲ್ ಜಲಾಶಯದ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಬೇಟೆಗಾರರ ಉರುಳಿಗೆ ಸಿಲುಕಿ ಮೃತಪಟ್ಟಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ.

ಬೇಟೆಗಾರರು ಜಲಾಶಯದ ನೀರು ಕುಡಿಯಲು ಬರುವ ಪ್ರಾಣಿಗಳನ್ನು ಸೆರೆ ಹಿಡಿಯಲು ಉರುಳು ಹಾಕಿದ್ದಾರೆ. ಈ ಉರುಳಿಗೆ ಹುಲಿ ಸಿಲುಕಿ ಮೃತಪಟ್ಟಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಡಿಸಿಎಫ್ ಶ್ರೀಪತಿ ವಲಯ ಅರಣ್ಯ ಅಧಿಕಾರಿ ವಾಸು ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ ನಂತರ ಸಮಗ್ರ ಮಾಹಿತಿ ನೀಡುವುದಾಗಿ ಡಿಸಿಎಫ್ ಶ್ರೀಪತಿ ಪತ್ರಿಕೆಗೆ ತಿಳಿಸಿದ್ದಾರೆ.

Tags:
error: Content is protected !!