ಚಾಮರಾಜನಗರ

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ಹುಲಿರಾಯ ದರ್ಶನ ಕೊಟ್ಟಿದ್ದು, ಪ್ರವಾಸಿಗರು ಫುಲ್ ಫಿದಾ ಆಗುವ ಮೂಲಕ ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ.

ತಾಲ್ಲೂಕಿನ ಗಡಿಯಲ್ಲಿರುವ ಕಾವೇರಿ ವನ್ಯಜೀವಿ ವಿಭಾಗದ ಗೋಪಿನಾಥಂ ವನ್ಯಜೀವಿ ವಲಯದ ನಾಮದಳ್ಳಿ ಅರಣ್ಯ ಪ್ರದೇಶದಲ್ಲಿ ಸಫಾರಿಗೆ ತೆರಳಿದ ವೇಳೆ ಶನಿವಾರ ಸಂಜೆ ಹುಲಿ ಕಾಣಿಸಿಕೊಂಡಿದೆ.

ಕಳೆದ ಎರಡು ವರ್ಷಗಳಿಂದ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂನಲ್ಲಿ ಸಫಾರಿ ಪ್ರಾರಂಭವಾಗಿದ್ದು, ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆ ಸಫಾರಿ ನಡೆಯುತ್ತಲೇ ಇದೆ.

ಆದರೆ ಸಫಾರಿ ವೇಳೆ ಹುಲಿ ಕಾಣಿಸಿಕೊಂಡಿರುವುದು ಬೆರಳಣಿಕೆಯಷ್ಟು ಮಾತ್ರ. ಇದುವರೆಗೂ ಸಫಾರಿ ವೇಳೆ ಪ್ರವಾಸಿಗರಿಗೆ ಆನೆ, ಚಿರತೆ, ಜಿಂಕೆ, ಕಾಟಿ, ಕಡವೆ ಕರಡಿ ಸೇರಿದಂತೆ ಇನ್ನಿತರ ಪ್ರಾಣಿಗಳು ಕಾಣಿಸಿಕೊಂಡಿದ್ದವು. ಕಳೆದ ವರ್ಷ ಹುಲಿ ಸಫಾರಿಗರಿಗೆ ದರ್ಶನ ನೀಡಿತ್ತು. ಆದರೆ ಹಲವು ದಿನಗಳಿಂದ ಹುಲಿ ದರ್ಶನ ನೀಡಿಲ್ಲ. ಶನಿವಾರ ಸಂಜೆ ಹುಲಿ ಕಾಣಿಸಿಕೊಂಡಿರುವುದು ಪ್ರವಾಸಿಗರಿಗೆ ತೀವ್ರ ಸಂತೋಷವನ್ನುಂಟು ಮಾಡಿದೆ.

ತಮಿಳುನಾಡು ಪ್ರವಾಸಿಗರೇ ಹೆಚ್ಚು: ಗೋಪಿನಾಥಂನಲ್ಲಿ ನಡೆಯುತ್ತಿರುವ ಸಫಾರಿಗೆ ಕರ್ನಾಟಕದ ಪ್ರವಾಸಿಗರಿಗಿಂತ ತಮಿಳುನಾಡು ಪ್ರವಾಸಿಗರೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರಕೃತಿಯ ಸೊಬಗನ್ನು ಸವಿಯುತ್ತಿದ್ದಾರೆ.

ಪ್ರತಿನಿತ್ಯ ಸಫಾರಿ ಇದ್ದರು ಶನಿವಾರ ಹಾಗೂ ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಉಳಿದ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆ ಇದೆ. ಆನ್‌ಲೈನ್ ಮುಖಾಂತರ ನೋಂದಣಿ ಮಾಡಿಕೊಂಡ ಪ್ರವಾಸಿಗರಿಗೆ ಸಫಾರಿ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಸುಮಾರು 10 ರಿಂದ 15 ಹುಲಿಗಳು ಇರುವುದಾಗಿ ತಿಳಿದು ಬಂದಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಮೀಣ್ಯಂ ಸಮೀಪ 5 ಹುಲಿಗಳು ವಿಷ ಪ್ರಶನಾದಿಂದ ಮೃತಪಟ್ಟ ನಂತರ ದಿನಗಳಲ್ಲಿ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿಯೂ ಒಂದು ತಾಯಿ ಹುಲಿ ಹಾಗೂ ನಾಲ್ಕು ಹುಲಿ ಮರಿಗಳು ಕಾಣಿಸಿಕೊಂಡಿದೆ. ಇದಲ್ಲದೆ ಕೊತ್ತನೂರು ಅರಣ್ಯ ಪ್ರದೇಶದಲ್ಲಿಯೂ ಹುಲಿ ಕಾಣಿಸಿಕೊಂಡಿದೆ. ಇದೀಗ ಹುಲಿ ಸರ್ವೆ ಕಾರ್ಯ ಪ್ರಗತಿಯಲ್ಲಿದ್ದು ಸಂಪೂರ್ಣ ಮುಗಿದ ನಂತರ ಎಷ್ಟು ಹುಲಿಗಳಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ತಿಳಿಯಲಿದೆ ಎಂದು ಕಾವೇರಿ ವನ್ಯಜೀವಿಧಾಮದ ಡಿಸಿಎಫ್ ಸುರೇಂದ್ರ ತಿಳಿಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

7 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

7 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

7 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

7 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

7 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

7 hours ago