5 tiger killing case: Three accused taken into custody by Forest Department
ಹನೂರು : ಐದು ಹುಲಿಗಳ ಸಾವಿಗೆ ಕಾರಣವಾಗಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಮೂವರು ಆರೋಪಿಗಳನ್ನು ಜೂನ್ 28ರ ಶನಿವಾರ ದಂದು ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ಜೂನ್ 30ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು.
ಜೂನ್ 30ರಂದು ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಗಳನ್ನು ಹೆಚ್ಚಿನ ವಿಚಾರಣೆ ಮಾಡಬೇಕಿರುವುದರಿಂದ ಅರಣ್ಯ ಇಲಾಖೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದ ಹಿನ್ನೆಲೆ ನ್ಯಾಯಾಧಿಶರು ಜುಲೈ 3ರವರೆಗೆ ಕಸ್ಟಡಿಗೆ ನೀಡಿದ್ದರು.
ಆದರೆ ಜೂನ್ 30ರಂದು ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್, ಎಸಿಎಫ್, ಆರ್ಎಫ್ ಒ ರವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ್ದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಒಂದು ದಿನ ವಿಚಾರಣೆ ಮಾಡಿ ವಾಪಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನ್ಯಾಯಾಧೀಶರು 3 ದಿನಗಳ ಕಾಲ ಮೂವರು ಆರೋಪಿಗಳನ್ನು ವಿಚಾರಣೆ ನಡೆಸಲು ಅವಕಾಶ ಮಾಡಿಕೊಟ್ಟರೂ ಅರಣ್ಯ ಇಲಾಖೆ ಅಧಿಕಾರಿಗಳು ಕೇವಲ ಒಂದು ದಿನಕ್ಕೆ ವಿಚಾರಣೆ ಮುಗಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…