ಚಾಮರಾಜನಗರ

ಹುಲಿ ಸಾವು ಪ್ರಕರಣ : ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ

ಹನೂರು:  ತಾಯಿ ಹುಲಿ ಮತ್ತು ನಾಲ್ಕು ಹುಲಿ ಮರಿಗಳನ್ನು ಸಂರಕ್ಷಣೆ ಮಾಡುವಲ್ಲಿ ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿ ಸಿ ಎಫ್ ಚಕ್ರಪಾಣಿ, ಎಸಿಎಫ್ ಗಜಾನನ ಹೆಗಡೆ, ವಲಯ ಅರಣ್ಯಾಧಿಕಾರಿ ಮಾದೇಶ್ ರವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಸರ್ಕಾರ ಆದೇಶ ಹೊರಡಿಸಿದೆ.

ತಾಯಿ ಮತ್ತು ನಾಲ್ಕು ಹುಲಿ ಮರಿಗಳು ರಸ್ತೆಯ 100 ಮೀಟರ್ ದೂರದಲ್ಲಿ ಸತ್ತು ಬಿದ್ದಿದ್ದರೂ ಎರಡು ದಿನಗಳವರೆಗೆ ಇಲಾಖೆಯ ಸಿಬ್ಬಂದಿಯ ಗಮನಕ್ಕೆ ಬಾರದಿರುವುದು, ಅರಣ್ಯ ವನ್ಯಜೀವಿ ಸಂರಕ್ಷಣೆಯಲ್ಲಿ ಲೋಪವಾಗಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಸಾವಿಗೀಡಾದ ಸ್ಥಳದಿಂದ ಕೇವಲ 800 ಮೀಟರ್ ದೂರದಲ್ಲಿ ಕಳ್ಳ ಬೇಟೆ ನಿಗ್ರಹ ಶಿಬಿರವಿದ್ದರೂ ವನ್ಯಜೀವಿ ರಕ್ಷಣೆಯಾಗದಿರುವುದು, ಕಳೆದ ಮೂರು ತಿಂಗಳಿನಿಂದ ಮುಂಚೂಣಿಯ ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಭತ್ಯೆ ನೀಡದೇ ಇರುವುದು, ಗಸ್ತು ಕಾರ್ಯಕ್ಕೆ ಅಡಚಣೆ ಉಂಟಾಗಿದೆ. ಇದಕ್ಕೆ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಲಯ ಅರಣ್ಯಾಧಿಕಾರಿ,ಉಪ ವಲಯ ಅರಣ್ಯಾಧಿಕಾರಿ, ಗಸ್ತು ಸಿಬ್ಬಂದಿಯ ಕರ್ತವ್ಯ ಲೋಪವೇ ಕಾರಣ ಎಂಬುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನೆಲೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದ ವರೆಗೆ ಕಡ್ಡಾಯ ರಜೆಯ ಮೇಲೆ ಕಳುಹಿಸಲು ನಿರ್ದೇಶಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಉಳಿದಂತೆ ಉಪವಲಯ ಅರಣ್ಯಾಧಿಕಾರಿ ಮತ್ತು ಗಸ್ತು ಸಿಬ್ಬಂದಿಗಳ ಸಂಬಂಧ ಕ್ರಮವನ್ನು ಪ್ರತ್ಯೇಕವಾಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಚಾಮರಾಜನಗರ ವೃತ್ತ ರವರ ಹಂತದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಮಲೆ ಮಹದೇಶ್ವರ ವನ್ಯಜೀವಿಧಾಮದ ಉಪಸಂರಕ್ಷಣಾಧಿಕಾರಿಯಾಗಿದ್ದ ಚಕ್ರಪಾಣಿ ರವರ ಹುದ್ದೆಗೆ ಈ ಹಿಂದೆ ಡಿಸಿಎಫ್ ಆಗಿದ್ದ ಸಂತೋಷ್ ಕುಮಾರ್ ರವರಿಗೆ ಹೆಚ್ಚುವರಿ ಪ್ರಭಾರ ವಹಿಸಲಾಗಿದೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಗಜಾನನ ಹೆಗಡೆಯ ಬದಲಾಗಿ ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ಉಪ ವಿಭಾಗದ ಸ್ವಪ್ಟಿಲ್ ಮನೋಹರ್ ಅಹಿರೆ ರವರಿಗೆ ಹೆಚ್ಚುವರಿ ಪ್ರಭಾರ ಹುದ್ದೆ ನೀಡಲಾಗಿದೆ.

ವಲಯ ಅರಣ್ಯಾಧಿಕಾರಿ ಮಾದೇಶ್ ರವರ ಸ್ಥಳಕ್ಕೆ ಪ್ರೊಫೆಷನರಿ ಎಸಿಎಫ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಉಮಾಪತಿ ರವರನ್ನು ಹೂಗ್ಯಂ ವನ್ಯಜೀವಿ ವಲಯ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡು ಕರ್ತವ್ಯ ನಿರ್ವಹಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅರಣ್ಯಪಡೆಯ ಮುಖ್ಯಸ್ಥರು ಆದೇಶ ಹೊರಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

12 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

12 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

13 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

13 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

13 hours ago