ಹನೂರು: ತಾಯಿ ಹುಲಿ ಮತ್ತು ನಾಲ್ಕು ಹುಲಿ ಮರಿಗಳನ್ನು ಸಂರಕ್ಷಣೆ ಮಾಡುವಲ್ಲಿ ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿ ಸಿ ಎಫ್ ಚಕ್ರಪಾಣಿ, ಎಸಿಎಫ್ ಗಜಾನನ ಹೆಗಡೆ, ವಲಯ ಅರಣ್ಯಾಧಿಕಾರಿ ಮಾದೇಶ್ ರವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಸರ್ಕಾರ ಆದೇಶ ಹೊರಡಿಸಿದೆ.
ತಾಯಿ ಮತ್ತು ನಾಲ್ಕು ಹುಲಿ ಮರಿಗಳು ರಸ್ತೆಯ 100 ಮೀಟರ್ ದೂರದಲ್ಲಿ ಸತ್ತು ಬಿದ್ದಿದ್ದರೂ ಎರಡು ದಿನಗಳವರೆಗೆ ಇಲಾಖೆಯ ಸಿಬ್ಬಂದಿಯ ಗಮನಕ್ಕೆ ಬಾರದಿರುವುದು, ಅರಣ್ಯ ವನ್ಯಜೀವಿ ಸಂರಕ್ಷಣೆಯಲ್ಲಿ ಲೋಪವಾಗಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಸಾವಿಗೀಡಾದ ಸ್ಥಳದಿಂದ ಕೇವಲ 800 ಮೀಟರ್ ದೂರದಲ್ಲಿ ಕಳ್ಳ ಬೇಟೆ ನಿಗ್ರಹ ಶಿಬಿರವಿದ್ದರೂ ವನ್ಯಜೀವಿ ರಕ್ಷಣೆಯಾಗದಿರುವುದು, ಕಳೆದ ಮೂರು ತಿಂಗಳಿನಿಂದ ಮುಂಚೂಣಿಯ ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಭತ್ಯೆ ನೀಡದೇ ಇರುವುದು, ಗಸ್ತು ಕಾರ್ಯಕ್ಕೆ ಅಡಚಣೆ ಉಂಟಾಗಿದೆ. ಇದಕ್ಕೆ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಲಯ ಅರಣ್ಯಾಧಿಕಾರಿ,ಉಪ ವಲಯ ಅರಣ್ಯಾಧಿಕಾರಿ, ಗಸ್ತು ಸಿಬ್ಬಂದಿಯ ಕರ್ತವ್ಯ ಲೋಪವೇ ಕಾರಣ ಎಂಬುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನೆಲೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದ ವರೆಗೆ ಕಡ್ಡಾಯ ರಜೆಯ ಮೇಲೆ ಕಳುಹಿಸಲು ನಿರ್ದೇಶಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಉಳಿದಂತೆ ಉಪವಲಯ ಅರಣ್ಯಾಧಿಕಾರಿ ಮತ್ತು ಗಸ್ತು ಸಿಬ್ಬಂದಿಗಳ ಸಂಬಂಧ ಕ್ರಮವನ್ನು ಪ್ರತ್ಯೇಕವಾಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಚಾಮರಾಜನಗರ ವೃತ್ತ ರವರ ಹಂತದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಮಲೆ ಮಹದೇಶ್ವರ ವನ್ಯಜೀವಿಧಾಮದ ಉಪಸಂರಕ್ಷಣಾಧಿಕಾರಿಯಾಗಿದ್ದ ಚಕ್ರಪಾಣಿ ರವರ ಹುದ್ದೆಗೆ ಈ ಹಿಂದೆ ಡಿಸಿಎಫ್ ಆಗಿದ್ದ ಸಂತೋಷ್ ಕುಮಾರ್ ರವರಿಗೆ ಹೆಚ್ಚುವರಿ ಪ್ರಭಾರ ವಹಿಸಲಾಗಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಗಜಾನನ ಹೆಗಡೆಯ ಬದಲಾಗಿ ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ಉಪ ವಿಭಾಗದ ಸ್ವಪ್ಟಿಲ್ ಮನೋಹರ್ ಅಹಿರೆ ರವರಿಗೆ ಹೆಚ್ಚುವರಿ ಪ್ರಭಾರ ಹುದ್ದೆ ನೀಡಲಾಗಿದೆ.
ವಲಯ ಅರಣ್ಯಾಧಿಕಾರಿ ಮಾದೇಶ್ ರವರ ಸ್ಥಳಕ್ಕೆ ಪ್ರೊಫೆಷನರಿ ಎಸಿಎಫ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಉಮಾಪತಿ ರವರನ್ನು ಹೂಗ್ಯಂ ವನ್ಯಜೀವಿ ವಲಯ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡು ಕರ್ತವ್ಯ ನಿರ್ವಹಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅರಣ್ಯಪಡೆಯ ಮುಖ್ಯಸ್ಥರು ಆದೇಶ ಹೊರಡಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…