ಚಾಮರಾಜನಗರ

ಹುಲಿ ಹೆಜ್ಜೆ ಗುರುತು ಪತ್ತೆ : ಗ್ರಾಮಸ್ಥರಲ್ಲಿ ಆತಂಕ

ಹನೂರು : ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿದೊಡ್ಡಿ ಬಳಿ ಹುಲಿ ಹೆಜ್ಜೆ ಗುರುತು ಕಾಣಿಸಿಕೊಂಡಿದ್ದು ಜನರು ಆತಂಕಗೊಂಡಿದ್ದಾರೆ.

ಮಲೆಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಿ.ಜಿ.ಪಾಳ್ಯ ವಲಯಕ್ಕೆ ಒಳಪಡುವ ಚಿಕ್ಕರಂಗಶೆಟ್ಟಿದೊಡ್ಡಿ ಗ್ರಾಮದ ಬಳಿ ಇರುವ ಸೂರಿಕೆರೆ ಮಹದೇಶ್ವರ ದೇವಸ್ಥಾನದ ಹತ್ತಿರ ರಾತ್ರಿ ಹುಲಿಯೊಂದು ಓಡಾಡಿದ್ದು ಹೆಜ್ಜೆ ಗುರುತು ಪತ್ತೆಯಾಗಿದೆ.

ಹುಲಿ ಹೆಜ್ಜೆ ಗುರುತು ಕಂಡ ಸ್ಥಳೀಯರು ಆತಂಕಗೊಂಡಿದ್ದು ರಾತ್ರಿ ವೇಳೆ ಜಮೀನುಗಳಿಗೆ ತೆರಳಲು ರೈತರು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ಸೋಲಾರ್ ಬೇಲಿ ಅಳವಡಿಸಬೇಕು ಎಂದು ಪರಿಸರ ಪ್ರೇಮಿ ಎನ್.ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

2 hours ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

3 hours ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

4 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

5 hours ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

5 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

7 hours ago