ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಬೇಗೂರು ರಸ್ತೆಯ ಬದಿಯ ಜಮೀನಿನಲ್ಲಿ ಭಾರೀ ಗಾತ್ರದ ಹುಲಿಯೊಂದು ಕಾಣಿಸಿಕೊಂಡಿದ್ದು, ರಸ್ತೆಯಲ್ಲಿ ಸಂಚರಿಸುತ್ತಿದ್ದವರು ನೋಡಿ ಕೂಗಿಕೊಂಡಾಗ ಓಡಿಹೋಗಿದೆ.
ಹುಲಿ ಅಲ್ಲಿಂದ ಓಡಿಹೋಗುವ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿದಿದ್ದು ಸಾಮಾಜಿಕ ಜಾಕತಾಣದಲ್ಲಿ ಹರಿಯಬಿಟ್ಟಿದ್ದಾರೆ. ಹುಲಿ ಪ್ರತ್ಯಕ್ಷವಾಗಿದ್ದರಿಂದ ಸೋಮಹಳ್ಳಿ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದೆ.
ಸೋಮಹಳ್ಳಿ, ಹಕ್ಕಲಪುರ, ಪಡಗೂರು, ಸಂಪಿಗೆಪುರ ಸೇರಿದಂತೆ ಅನೇಕ ಭಾಗದಲ್ಲಿ ಹುಲಿ ಓಡಾಡುತ್ತಿದ್ದು, ಜನರು ಭೀತಿಯಲ್ಲಿದ್ದಾರೆ. ಗುರುವಾರ ಸಂಜೆ ದೇಶಿಪುರ ಕಾಲೋನಿಯಲ್ಲಿ ಹುಲಿ ಮಹಿಳೆಯನ್ನು ಕೊಂದು ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.
ಅರಣ್ಯ ಇಲಾಖೆ ಕೂಡಲೆ ಬೋನು ಇರಿಸಿ ಹುಲಿ ಸೆರೆ ಹಿಡಿಯಬೇಕು. ನಮ್ಮ ಜಮೀನಿನಲ್ಲಿಯೇ ಹುಲಿ ಒಡಾಡುತ್ತಿದೆ, ಮನುಷ್ಯನ ಮೇಲೆ ಹುಲಿ ದಾಳಿ ನಡೆಸಿ ಮನುಷ್ಯನ ಪ್ರಾಣ ಹೋದ ಮೇಲೆ ಜಾಗೃತರಾಗುವ ಮೊದಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಬೋನು ಇರಿಸಬೇಕು ಎಂದು ವಕೀಲ ಸುರೇಶ್ ಮೌರಿ ಒತ್ತಾಯಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…