ಚಾಮರಾಜನಗರ

ಜಮೀನಿನಲ್ಲಿ ಹುಲಿ ಪ್ರತ್ಯಕ್ಷ : ಸೋಮಹಳ್ಳಿ ಗ್ರಾಮಸ್ಥರಲ್ಲಿ ಆತಂಕ

ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಬೇಗೂರು ರಸ್ತೆಯ ಬದಿಯ ಜಮೀನಿನಲ್ಲಿ ಭಾರೀ ಗಾತ್ರದ ಹುಲಿಯೊಂದು ಕಾಣಿಸಿಕೊಂಡಿದ್ದು, ರಸ್ತೆಯಲ್ಲಿ ಸಂಚರಿಸುತ್ತಿದ್ದವರು ನೋಡಿ ಕೂಗಿಕೊಂಡಾಗ ಓಡಿಹೋಗಿದೆ.

ಹುಲಿ ಅಲ್ಲಿಂದ ಓಡಿಹೋಗುವ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿದಿದ್ದು ಸಾಮಾಜಿಕ ಜಾಕತಾಣದಲ್ಲಿ ಹರಿಯಬಿಟ್ಟಿದ್ದಾರೆ. ಹುಲಿ ಪ್ರತ್ಯಕ್ಷವಾಗಿದ್ದರಿಂದ ಸೋಮಹಳ್ಳಿ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದೆ.

ಸೋಮಹಳ್ಳಿ, ಹಕ್ಕಲಪುರ, ಪಡಗೂರು, ಸಂಪಿಗೆಪುರ ಸೇರಿದಂತೆ ಅನೇಕ ಭಾಗದಲ್ಲಿ ಹುಲಿ ಓಡಾಡುತ್ತಿದ್ದು, ಜನರು ಭೀತಿಯಲ್ಲಿದ್ದಾರೆ. ಗುರುವಾರ ಸಂಜೆ ದೇಶಿಪುರ ಕಾಲೋನಿಯಲ್ಲಿ ಹುಲಿ ಮಹಿಳೆಯನ್ನು ಕೊಂದು ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.

ಅರಣ್ಯ ಇಲಾಖೆ ಕೂಡಲೆ ಬೋನು ಇರಿಸಿ ಹುಲಿ ಸೆರೆ ಹಿಡಿಯಬೇಕು. ನಮ್ಮ ಜಮೀನಿನಲ್ಲಿಯೇ ಹುಲಿ ಒಡಾಡುತ್ತಿದೆ, ಮನುಷ್ಯನ ಮೇಲೆ ಹುಲಿ ದಾಳಿ ನಡೆಸಿ ಮನುಷ್ಯನ ಪ್ರಾಣ ಹೋದ ಮೇಲೆ ಜಾಗೃತರಾಗುವ ಮೊದಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಬೋನು ಇರಿಸಬೇಕು ಎಂದು ವಕೀಲ ಸುರೇಶ್ ಮೌರಿ ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಾಳೆ ಬುದ್ಧ ಪೂರ್ಣಿಮೆ: ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…

54 mins ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಸಾಯಿಸಿ ಪೊಲೀಸರಿಗೆ ಶರಣಾದ ಪತಿ

ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ  ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…

1 hour ago

ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ: ಸಂಕಷ್ಟದಲ್ಲಿ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಅಮೇರಿಕಾ ಮತ್ತು ಇರಾನ್‌ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌…

2 hours ago

ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…

3 hours ago

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

6 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

7 hours ago