ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ ಎಂಟ್ರಿ ಕಲ್ಪುರ ಗ್ರಾಮಸ್ಥರ ನಿದ್ದೆಗೆಡಿಸಿದೆ.
ಕಳೆದ ನಾಲ್ಕು ತಿಂಗಳಿಂದ ಜಮೀನುಗಳಲ್ಲಿ ಹುಲಿ ಬೀಡುಬಿಟ್ಟಿದ್ದು, ರೈತರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ಹುಲಿ ದಾಳಿಯ ಭೀತಿಯಿಂದಾಗಿ ಕೃಷಿ ಕಾರ್ಮಿಕರು ಜಮೀನಿಗೆ ಬರಲು ನಿರಾಕರಿಸುತ್ತಿದ್ದಾರೆ. ಇದರಿಂದಾಗಿ ಕೈಗೆ ಬಂದ ಫಸಲನ್ನು ಕೊಯ್ಲು ಮಾಡಲಾಗದೆ ರೈತರು ಭಾರಿ ನಷ್ಟ ಅನುಭವಿಸುತ್ತಿದ್ದಾರೆ.
ಆರಂಭದಲ್ಲಿ ಅರಣ್ಯ ಇಲಾಖೆ ಸ್ವಲ್ಪ ಭದ್ರತೆ ಒದಗಿಸಿದರೂ, ಈಗ ಕಾರ್ಯಾಚರಣೆ ಸಂಪೂರ್ಣ ಸ್ಥಗಿತಗೊಂಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಈ ಭಾಗದಲ್ಲಿ ಹುಲಿ ದಾಳಿಗೆ ಹಲವು ಹಸುಗಳು ಹಾಗೂ ಹತ್ತಾರು ನವಿಲುಗಳು ಬಲಿಯಾಗಿವೆ. ಹುಲಿ ಅಲೆದಾಟದ ದೃಶ್ಯಗಳು ಕಂಡುಬಂದರೂ ಇಲಾಖೆ ಮಾತ್ರ ಜಾಣ ಕುರುಡುತನ ಪ್ರದರ್ಶಿಸುತ್ತಿದೆ” ಎಂದು ಸ್ಥಳೀಯರು ದೂರಿದ್ದಾರೆ.
ಹುಲಿ ಸೆರೆಗೆ ಅರಣ್ಯ ಇಲಾಖೆ ಕೇವಲ ಕಾಟಾಚಾರಕ್ಕೆ ಬೋನು ಮತ್ತು ಕ್ಯಾಮೆರಾ ಟ್ರ್ಯಾಪ್ಗಳನ್ನು ಅಳವಡಿಸಿದೆ ಎಂಬುದು ಗ್ರಾಮಸ್ಥರ ಗಂಭೀರ ಆರೋಪವಾಗಿದೆ.
“ನಾವು ಹುಲಿಯನ್ನು ಕೊಂದರೆ ನಮ್ಮನ್ನು ಜೈಲಿಗೆ ಹಾಕುತ್ತೀರಿ, ಅದೇ ಹುಲಿ ನಮ್ಮನ್ನು ಕೊಂದರೆ ಯಾರನ್ನು ಜೈಲಿಗೆ ಹಾಕುತ್ತೀರಿ?” ಎಂದು ಇಲಾಖೆಯ ಅಧಿಕಾರಿಗಳನ್ನು ರೈತರು ಪ್ರಶ್ನಿಸಿದ್ದಾರೆ.
ಮಹದೇಶ್ವರ ವನ್ಯಧಾಮದಲ್ಲಿ ನಡೆದ ಅಹಿತಕರ ಘಟನೆಗಳು ಇಲ್ಲಿಯೂ ಮರುಕಳಿಸುವ ಮುನ್ನ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕು. ತಕ್ಷಣವೇ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…