ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯ ವ್ಯಾಪ್ತಿಯ ಪಚ್ಚೆ ದೊಡ್ಡಿ ಗ್ರಾಮದ ಸಮೀಪ ಹುಲಿ ಕೊಂದು ಮೂರು ತುಂಡು ಮಾಡಿ ನಾಪತ್ತೆಯಾಗಿದ್ದ ಗೋವಿಂದನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದ ನಂತರ ನಾಲ್ವರ ಹೆಸರನ್ನು ತಿಳಿಸಿದ್ದು ನಾಲ್ವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಹನೂರು ತಾಲೂಕಿನ ಕಾಂಚಳ್ಳಿ ಗ್ರಾಮದ ಸಂಜು, ಪ್ರದೀಪ್, ಆನಂದ್ ಹಾಗೂ ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ನಾರಾಯಣ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿ ಗ್ರಾಮದ ಸಮೀಪದ ಅರಣ್ಯದಲ್ಲಿ ಒಂದು ಹುಲಿಯನ್ನು ಕೊಂದು ಅರ್ಧ ಕಳೆ ಬರವನ್ನು ಮಣ್ಣಿನಲ್ಲಿ ಹುದಗಿಸಿ, ಹುಲಿಯ ತಲೆ ಭುಜ ಮುಂದಿನ ಕಾಲುಗಳು, ಅನತಿ ದೂರದಲ್ಲಿ ಉಳಿದ ಭಾಗಗಳು ದೊರೆತಿತ್ತು.
ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಐದು ಜನರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಇವರು ಕೋರ್ಟಿನಿಂದ ಜಾಮೀನು ಪಡೆದು ಹೊರ ಬಂದಿದ್ದರು ಆದರೆ ಪ್ರಕರಣದ ಪ್ರಮುಖ ಆರೋಪಿ ಗೋವಿಂದ ಮಾತ್ರ ಸಿಕ್ಕಿರಲಿಲ್ಲ. ಕಳೆದ ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ಈತನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದಾಗ ಹುಲಿ ಕೊಂದ ಪ್ರಕರಣದಲ್ಲಿ ಇನ್ನೂ ನಾಲ್ವರು ಭಾಗಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದ, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ವರು ಆರು ಇದರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…
ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…