ಹನೂರು : ಮಲೆಮಹದೇಶ್ವರ ವನ್ಯಜೀವಿಧಾಮ ಪಚ್ಚೆದೊಡ್ಡಿ ಸಮೀಪ ಹುಲಿ ಕೊಂದು ಮೂರು ಪೀಸ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದೆ.
ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ವ್ಯಕ್ತಿ ಅರಣ್ಯ ಇಲಾಖೆ ವಶದಲ್ಲಿರುವಾತ, ಹುಲಿಯನ್ನು ಕೊಂದು ಮೂರು ಭಾಗಗಳಾಗಿ ತುಂಡರಿಸಿ ಅರಣ್ಯದಲ್ಲೇ ಹುದುಗಿಸಿಟ್ಟಿದ್ದ ಗುಮಾನಿ ಮೇಲೆ ಈತನನ್ನು ವಶಕ್ಕೆ ಪಡೆದಿದ್ದು ಪ್ರತಿಕಾರಕ್ಕೆ ಈತ ಹುಲಿ ಕೊಂದಿದ್ದಾನೆಂದು ಉನ್ನತ ಮೂಲಗಳು ಆಂದೋಲನಕ್ಕೆ ತಿಳಿಸಿವೆ.
ಹುಲಿ ಹತ್ಯೆಯಲ್ಲಿ ಈತನೊಬ್ಬನೇ ಭಾಗಿಯಾದನೇ, ಈತನಿಗೆ ಯಾರದಾರೂ ಕೈ ಜೋಡಿಸಿದರೇ, ಭಾರೀ ಗಾತ್ರದ ಹುಲಿಯನ್ನು ಈತ ಕೊಂದಿದ್ದು ಹೇಗೆ? ಎಂಬುದು ವಿಚಾರಣೆ ಬಳಿಕ ತಿಳಿದುಬರಬೇಕಿದೆ.
ಇದನ್ನೂ ಓದಿ:-ಕಲ್ತುಳಿತ | ವಿಜಯ್ ಬಳಸಿದ್ದ ಪ್ರಚಾರದ ಬಸ್ ಎಸ್ಐಟಿ ವಶಕ್ಕೆ
ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದ ಬಗ್ಗೆ ಮಲೆಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಭಾಸ್ಕರ್ ಪ್ರತಿಕ್ರಿಯಿಸಿ, ಪಚ್ಚೆದೊಡ್ಡಿ ಗ್ರಾಮದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಬಳಿಕವಷ್ಟೇ ಮಾಹಿತಿ ಬಹಿರಂಗಗೊಳಿಸಲಾಗುವುದು, ಹುಲಿ ಕೊಂದ ಬಗೆ ಬಗ್ಗೆ ಎಫ್ಎಸ್ಎಲ್ ವರದಿ ಕಾಯುತ್ತಿದ್ದೇವೆ ಎಂದು ಹೇಳಿದರು.
ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ
ಅರಣ್ಯ ಸಚಿವ ಈಶ್ವರ್ ಖಂಡ್ರೆ ಹುಲಿ ಹತ್ಯೆ ಕೇಸನ್ನು ಗಂಭೀರವಾಗಿ ಪರಿಗಣಿಸಿ ಪಿಸಿಸಿಎಫ್ ಸ್ಮಿತಾ ನೇತೃತ್ವದಲ್ಲಿ ತನಿಖೆ ನಡೆಸಿ 8 ದಿನಗಳಲ್ಲಿ ವರದಿ ಕೊಡುವಂತೆ ಸೂಚಿಸಿದ ಬೆನ್ನಲ್ಲೇ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.
ಪಿಸಿಸಿಎಫ್ ಸ್ಮಿತಾ ಬಿಜ್ಜೂರು, ಎಪಿಸಿಸಿಎಫ್ ರಮೇಶ್ ತ್ರಿಪಾಠಿ, ಹುಲಿ ಯೋಜನೆಗಳ ಮೈಸೂರು ವಿಭಾಗದ ನಿರ್ದೇಶಕ ರಮೇಶ್ ಕುಮಾರ್ ತಂಡ ಸ್ಥಳಕ್ಕೆ ಭೇಟಿ ಕೊಟ್ಟು ಹುಲಿ ಕಳೇಬರ ದೊರೆತ ಸ್ಥಳಗಳನ್ನು ಜಾಲಾಡಿದರು.
ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಸಮಗ್ರ ಮಾಹಿತಿ ಪಡೆದ ಅಧಿಕಾರಿಗಳು ಕೂಲಂಕುಷವಾಗಿ ಪರಿಶೀಲನೆ ನಡೆಸಿದರು.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…